ಕರ್ನಾಟಕ

karnataka

ETV Bharat / state

ಏಸು ಪ್ರತಿಮೆ ವಿಚಾರ:  ಡಿಕೆಶಿ ಬೆಂಬಲದಿಂದ ದಾಖಲೆ ತಿದ್ದಲಾಗ್ತಿದೆ: ಆರ್​.ಅಶೋಕ್ ಆರೋಪ - ಬೆಂಗಳೂರಿನಲ್ಲಿ ಆರ್​.ಅಶೋಕ್ ಸುದ್ದಿಗೋಷ್ಠಿ

ಹಾರೋಹಳ್ಳಿ ಕಪಾಲ ಬೆಟ್ಟದಲ್ಲಿ ಏಸು ಪ್ರತಿಮೆ ಸ್ಥಾಪನೆ ಪ್ರಕರಣದ ವರದಿ ಬರುತ್ತಿದ್ದಂತೆ ರಾಜ್ಯ ಸರ್ಕಾರ ದಿಟ್ಟ ಕ್ರಮ ಕೈಗೊಳ್ಳುತ್ತದೆ. ಅದೇ ರೀತಿ ರಾಮನಗರ ಜಿಲ್ಲೆಯ ಮುನೇಶ್ವರ ಬೆಟ್ಟದಲ್ಲಿಯೂ ಅಕ್ರಮವಾಗಿ ಶಿಲುಬೆ ನಿರ್ಮಾಣ ಮಾಡಿದವರ ವಿರುದ್ಧ ಕ್ರಮ ಖಚಿತ ಎಂದು ಕಂದಾಯ ಸಚಿವ ಆರ್.ಅಶೋಕ್ ಎಚ್ಚರಿಕೆ ನೀಡಿದರು.

Minister RAshok press meet about kapala betta esu statue
ಆರ್​.ಅಶೋಕ್ ಸುದ್ದಿಗೋಷ್ಠಿ

By

Published : Jan 13, 2020, 2:34 PM IST

ಬೆಂಗಳೂರು:ಹಾರೋಹಳ್ಳಿ ಕಪಾಲಬೆಟ್ಟದಲ್ಲಿ ಏಸು ಪ್ರತಿಮೆ ಸ್ಥಾಪನೆ ಪ್ರಕರಣದ ವರದಿ ಬರುತ್ತಿದ್ದಂತೆ ರಾಜ್ಯ ಸರ್ಕಾರ ದಿಟ್ಟ ಕ್ರಮ ಕೈಗೊಳ್ಳುತ್ತದೆ. ಅದೇ ರೀತಿ ರಾಮನಗರ ಜಿಲ್ಲೆಯ ಮುನೇಶ್ವರ ಬೆಟ್ಟದಲ್ಲಿಯೂ ಅಕ್ರಮವಾಗಿ ಶಿಲುಬೆ ನಿರ್ಮಾಣ ಮಾಡಿದವರ ವಿರುದ್ಧ ಕ್ರಮ ಖಚಿತ ಎಂದು ಕಂದಾಯ ಸಚಿವ ಆರ್.ಅಶೋಕ್ ಎಚ್ಚರಿಕೆ ನೀಡಿದರು.

ಆರ್​.ಅಶೋಕ್ ಸುದ್ದಿಗೋಷ್ಠಿ

ಪದ್ಮನಾಭ ನಗರದ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಆರ್.ಅಶೋಕ್, ಹಾರೋಹಳ್ಳಿ ಕಪಾಲ ಬೆಟ್ಟದಲ್ಲಿ ಏಸು ಪ್ರತಿಮೆ ಸ್ಥಾಪನೆಗೆ ಸಂಘಟನೆಯವರಾಗಲಿ ಟ್ರಸ್ಟ್​ನವರಾಗಲಿ ಅನುಮತಿಯನ್ನೇ ಪಡೆದಿಲ್ಲ. ಡಿಸೆಂಬರ್​ನಲ್ಲಿ ಗ್ರಾಮ ಪಂಚಾಯ್ತಿಗೆ ಅರ್ಜಿ ಕೊಟ್ಟಿದ್ದಾರೆ. ಬೆಸ್ಕಾಂ ಅನುಮತಿಯನ್ನೇ ಪಡೆಯದೇ ದೂರದಿಂದ ಎಲೆಕ್ಟ್ರಿಕ್ ಲೈನ್ ಎಳೆದಿದ್ದಾರೆ. ಕಳೆದ ಆರು ವರ್ಷಗಳಿಂದ ಕೆಲವು ಪ್ರತಿಮೆಗಳನ್ನು ಸಾಗಿಸಿದ್ದಾರೆ. ಮೇಲಾಗಿ ಅಲ್ಲಿ ಟ್ರಸ್ಟ್ ಡೀಡ್ ನಲ್ಲಿ ಇಲ್ಲಿ ಆಸ್ಪತ್ರೆ, ಸ್ಕೂಲ್ ಮಾಡುವುದಾಗಿ ತಿಳಿಸಿದ್ದಾರೆ. ಈಗ ಅಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ನ ಏಸು ಪ್ರತಿಮೆ ಸ್ಥಾಪಿಸಿದ್ದಾರೆ. ಜಿಲ್ಲಾಧಿಕಾರಿಗಳ ವರದಿ ಕೇಳಿದ್ದೇನೆ. ಯಾಕೋ ಅಧಿಕಾರಿಗಳು ಹಿಂಜರಿಯುತ್ತಿದ್ದಾರೆ. ಅದಕ್ಕೆ ಆತುರವೇನಿಲ್ಲ. ಸಮಯ ತೆಗೆದುಕೊಳ್ಳಲಿ. ಆದರೆ ನಿಖರವಾದ ವರದಿಯನ್ನೇ ಕೊಡಬೇಕು ಎಂದು ಸೂಚಿಸಿದ್ದೇನೆ. ವರದಿ ಬಂದ ಬಳಿಕ ದಿಟ್ಟ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಮಾಹಿತಿ ನೀಡಿದರು.

ದಾಖಲೆಗಳು

ಮಾಜಿ ಸಚಿವ ಡಿ.ಕೆ ಶಿವಕುಮಾರ್ ಕನಕಪುರದ ಶಾಸಕರು ಅಷ್ಟೇ. ಕನಕಪುರವೇ ಅವರಿಗೆ ಸಂಬಂಧಿಸಿಲ್ಲ. ನಾವು ಗಲಾಟೆ ಮಾಡಿಸಲ್ಲ, ಗಲಾಟೆ ಮಾಡಿಸೋರು ಡಿ.ಕೆ ಶಿವಕುಮಾರ್. ಹಾಗಾಗಿ ಡಿಕೆಶಿ ಅಲ್ಲಿ ಪ್ರಚೋದಿಸುವುದು ಬೇಡ. ನಿಮಗೆ ಅಲ್ಲಿನವರೇ ಆದ ಶಿವಕುಮಾರ ಸ್ವಾಮಿಗಳು, ಬಾಲಗಂಗಾಧರನಾಥ ಸ್ವಾಮಿಗಳು ‌ಮರೆತು ಹೋದ್ರಾ? ಮೊದಲಿಗೆ ನಮ್ಮ ಹೆತ್ತ ತಾಯಿಯನ್ನು ಆರಾಧಿಸೋಣ. ಬಳಿಕ ಪಕ್ಕದ ಮನೆ ತಾಯಿಯ ಕಡೆ ನೋಡೋಣ. ನಮಗೆ ಊಟ ಆಗಿ ಮಿಕ್ಕಿದರೆ ಬೇರೆಯವರಿಗೆ ಹಂಚಬಹುದು. ನಮಗೆ ಯಾವ ಧರ್ಮವೂ ವಿರೋಧಿಯಲ್ಲ. ಮೊದಲಿಗೆ ನಮ್ಮ ಧರ್ಮವನ್ನು ಪೂಜಿಸಿ ಬಳಿಕ ಅನ್ಯ ಧರ್ಮವನ್ನು ಆರಾಧಿಸೋಣ ಎಂದು ಕಿಡಿಕಾರಿದರು.

ಅದೇ ರಾಮನಗರ ಜಿಲ್ಲೆಯ ಕಪಾಲ ಬೆಟ್ಟದ ಬಳಿಕ ಮುನೇಶ್ವರ ಬೆಟ್ಟದಲ್ಲಿಯೂ ಕೂಡ ತಮಿಳುನಾಡಿಂದ ಬಂದವರೊಬ್ಬರು ಅಕ್ರಮವಾಗಿ ಅತಿಕ್ರಮಿಸಿಕೊಂಡು ಶಿಲುಬೆ ನೆಟ್ಟಿದ್ದಾರೆ. ಸರ್ಕಾರದ ಸೂಚನೆಯನ್ನೂ ಧಿಕ್ಕರಿಸಿದ್ದಾರೆ. ಅವರ ವಿರುದ್ಧವೂ ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ದಾಖಲೆ ತಿದ್ದುವ ಕೆಲಸ :ಕಪಾಲ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣ ವಿವಾದ ತಾರಕಕ್ಕೇರಿದ ನಂತರ ಈಗ ಡಿ.ಕೆ.ಶಿವಕುಮಾರ್ ಅವರ ಕೃಪಾಕಟಾಕ್ಷದಿಂದ ದಾಖಲೆಗಳನ್ನು ತಿದ್ದುತ್ತಿದ್ದಾರೆ.‌ ಆದರೆ ಇದೆಲ್ಲಾ ನಡೆಯಲ್ಲ. ಮೂಲ ದಾಖಲೆಯಿಂದ ಎಲ್ಲವೂ ಗೊತ್ತಾಗಲಿದೆ. ಸದ್ಯ ವರದಿಗಾಗಿ ಕಾಯುತ್ತಿದ್ದೇವೆ ಎಂದರು.

ಜಾನಪದ ಜಾತ್ರೆ ಪುನರಾರಂಭ:ಪದ್ಮನಾಭನಗರದಲ್ಲಿ ಜಾನಪದ ಜಾತ್ರೆಯನ್ನು ಮರಳಿ ಆರಂಭಿಸಲಾಗುತ್ತದೆ. ಕಡಲೆ ಕಾಯಿ ಪರಿಷೆ, ಸಂಕ್ರಾಂತಿ ಗೋ ಪೂಜೆ ಹಾಗೂ ಆರ್ಯ ವೈಶ್ಯ ಸಮಾಜದ ಊಟೋಪಚಾರದ ವ್ಯವಸ್ಥೆ ಇದೆ. ಅಪ್ಟಟ ಗ್ರಾಮೀಣ ಪ್ರದೇಶದ 36 ಕಲಾ ತಂಡಗಳು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿವೆ. ಜನವರಿ 14 ಮತ್ತು 15 ರಂದು ಎರಡು ದಿನ ಕಾರ್ಯಕ್ರಮ ನಡೆಯಲಿದೆ. ಬರುವ ಎಲ್ಲ ಸಾರ್ವಜನಿಕರಿಗೆ ಕಬ್ಬು, ಎಳ್ಳು-ಬೆಲ್ಲ ಹಾಗೂ ಆರ್ಗಾನಿಕ್ ಬೆಲ್ಲ, ಕಡಲೆ ಕಾಯಿ ವಿತರಣೆ ಮಾಡಲಾಗುತ್ತದೆ ಎಂದು ಹೇಳಿದರು.

ABOUT THE AUTHOR

...view details