ಕರ್ನಾಟಕ

karnataka

ETV Bharat / state

ಮೈತ್ರಿ ಸರ್ಕಾರ ಉಳಿಯಲೆಂದು ಗಣಪತಿಗೆ ಮೃತ್ಯುಂಜಯ ಹೋಮ ಮಾಡಿಸಿದ ಸಚಿವ ರೇವಣ್ಣ..

ಕಳೆದ ಐದು ದಿನಗಳಿಂದ ಬರಿಗಾಲಿನಲ್ಲಿ ಓಡಾಡುತ್ತಿದ್ದ ಹೆಚ್‌.ಡಿ ರೇವಣ್ಣ, ಮೊನ್ನೆ ತಿರುಪತಿಗೆ ಹೋಗಿ ವಿಶೇಷ ಪೂಜೆ ಮಾಡಿಸಿ ಬಂದಿದ್ದಾರೆ. ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿಶ್ವಾಸ ಮತಯಾಚನೆ ಮಾಡಲು ಸ್ಪೀಕರ್ ಅವರನ್ನು ಕೋರಿದ್ದು, ಗೆಲುವಿಗಾಗಿ ಈ ಹೋಮ ಮಾಡಿಸಲಾಗುತ್ತಿದೆಯಂತೆ.

By

Published : Jul 13, 2019, 7:21 PM IST

ಸಚಿವ ರೇವಣ್ಣ

ಬೆಂಗಳೂರು :ದೈವ ಭಕ್ತರಾಗಿರುವ ಸಚಿವ ಹೆಚ್ ಡಿ ರೇವಣ್ಣನವರು ಮೈತ್ರಿ ಸರ್ಕಾರ ಉಳಿವಿಗಾಗಿ ದೇವರ ಮೊರೆ ಹೋಗಿದ್ದಾರೆ.

ಜಯನಗರ ನಾಲ್ಕನೇ ಬ್ಲಾಕ್‌ನಲ್ಲಿರುವ ಗಣಪತಿ ದೇವಾಲಯದಲ್ಲಿ ಹೆಚ್ ಡಿ ರೇವಣ್ಣ ಮೃತ್ಯುಂಜಯ ಹೋಮ ಮಾಡಿಸುತ್ತಿದ್ದಾರೆನ್ನಲಾಗಿದೆ. ಸರ್ಕಾರ ಸುಭದ್ರವಾಗಿರಲು ಎಂಟು ಅರ್ಚಕರಿಂದ ಮೃತ್ಯುಂಜಯ ಹೋಮ, ಗಣ ಹೋಮ ಮಾಡಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಗಣಪತಿ ದೇವಸ್ಥಾನದಲ್ಲಿ ವಿಶೇಷ ಹೋಮ-ಹವನ

ಕಳೆದ ಐದು ದಿನಗಳಿಂದ ಬರಿಗಾಲಿನಲ್ಲಿ ಓಡಾಡುತ್ತಿದ್ದ ಹೆಚ್‌ ಡಿ ರೇವಣ್ಣ, ಮೊನ್ನೆ ತಿರುಪತಿಗೆ ಹೋಗಿ ವಿಶೇಷ ಪೂಜೆ ಮಾಡಿಸಿ ಬಂದಿದ್ದಾರೆ. ಸಿಎಂ ಹೆಚ್‌ ಡಿ ಕುಮಾರಸ್ವಾಮಿ ವಿಶ್ವಾಸ ಮತಯಾಚನೆ ಮಾಡಲು ಸ್ಪೀಕರ್ ಅವರನ್ನು ಕೋರಿದ್ದು, ಗೆಲುವಿಗಾಗಿ ಈ ಹೋಮ ಮಾಡಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

ABOUT THE AUTHOR

...view details