ಕರ್ನಾಟಕ

karnataka

ಸಾವಿನ ಸಂಖ್ಯೆ ಮುಚ್ಚಿಟ್ಟಿಲ್ಲ, ಬಿಹಾರಗೆ ಹೋಲಿಸುವುದು ಸರಿಯಲ್ಲ: ಸಚಿವ ಡಾ. ಕೆ. ಸುಧಾಕರ್

By

Published : Jun 11, 2021, 9:34 PM IST

ರಾಜ್ಯದಲ್ಲಿ ಕೊರೊನಾ ಸಾವುಗಳನ್ನು ಮುಚ್ಚಿಟ್ಟಿಲ್ಲ, ಒಂದು ವೇಳೆ ರಿಯಾಯ್ತಿಯಿಂದ ಸೋಂಕು ಹೆಚ್ಚಳವಾದರೆ ಮತ್ತೆ ಕಠಿಣ ಕ್ರಮ ಗ್ಯಾರಂಟಿ ತೆಗೆದುಕೊಳ್ಳುತ್ತೇವೆ ಎಂದು ಸಚಿವ ಡಾ. ಸುಧಾಕರ್​ ತಿಳಿಸಿದ್ದಾರೆ.

minister sudhakar reaction
ಸಚಿವ ಡಾ.ಕೆ ಸುಧಾಕರ್ ಹೇಳಿಕೆ

ಬೆಂಗಳೂರು:ಸಾವಿನ ಸಂಖ್ಯೆ ಮುಚ್ಚಿಟ್ಟಿದ್ದಾರೆ ಎನ್ನುವ ಆರೋಪದ ಬಗೆಗಿನ ಮಾಧ್ಯಮಗಳ ಪ್ರಶ್ನೆಗಳಿಗೆ ಸಚಿವ ಸುಧಾಕರ್ ಉತ್ತರಿಸಿ, ರಾಜ್ಯದಲ್ಲಿ ಸಾವಿನ ಸಂಖ್ಯೆ ಮುಚ್ಚಿಟ್ಟಿಲ್ಲ, ಪದೇ ಪದೆ ಹೇಳುತ್ತಿದ್ದೇನೆ. ನಮ್ಮ ರಾಜ್ಯವನ್ನು ಬಿಹಾರಕ್ಕೆ ಹೋಲಿಸಬೇಡಿ. ಕರ್ನಾಟಕಕ್ಕೂ ಬಿಹಾರಕ್ಕೂ ಹೋಲಿಕೆ ಮಾಡುವುದು ಸರಿಯಲ್ಲ. ಯಾವುದೇ ಮಾಹಿತಿಯನ್ನು ಮುಚ್ಚಿಟ್ಟಿಲ್ಲ, ಅಂತಹ ಅವಕಾಶವೇ ಇಲ್ಲ ಎಂದು ಸ್ಪಷ್ಟನೆ ನೀಡಿದರು.

ಸಚಿವ ಡಾ.ಕೆ ಸುಧಾಕರ್ ಹೇಳಿಕೆ

ರಾಜ್ಯದಲ್ಲಿ ಅನ್​ಲಾಕ್ ಮಾಡಿರುವ ವಿಚಾರವಾಗಿ ಸಚಿವ ಸುಧಾಕರ ಸದಾಶಿವನಗರದ ನಿವಾಸದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ, ಅನ್​ಲಾಕ್ ಮಾಡಿದರೂ ಜನರು ಎಚ್ಚರಿಕೆಯಿಂದ ಇರಬೇಕು, ಎರಡು ಡೋಸ್ ಲಸಿಕೆ ಪಡೆಯೋವರೆಗೂ ಜನ ಎಚ್ಚರವಾಗಿ ಇರಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಕನಿಷ್ಠ ಶೇ 70 ಡೋಸ್ ಕಂಪ್ಲೀಟ್ ಆದ ಮೇಲೆ ನಾವು ಮೊದಲಿನಂತೆ ಆರಾಮಾಗಿ ಇರಬಹುದು. ಲಸಿಕೆ‌ ಹಾಕಿಸಿಕೊಳ್ಳೋವರೆಗೂ ಯಾರು ಮೈ ಮರೆಯಬೇಡಿ ಎಂದು ಎಚ್ಚರಿಕೆ ನೀಡಿದರು.
ರಾಜ್ಯದಲ್ಲಿ ಆರ್ಥಿಕ ನಷ್ಟವಾಗಿದೆ, ಹೀಗಾಗಿ ಕೆಲ ವಿನಾಯಿತಿ ಕೊಡಲಾಗಿದೆ. ಅಳೆದು ತೂಗಿ ನಿರ್ಧಾರ ಮಾಡಿದ್ದೇವೆ. ಒಂದು ವೇಳೆ ರಿಯಾಯ್ತಿಯಿಂದ ಸೋಂಕು ಹೆಚ್ಚಳವಾದರೆ ಮತ್ತೆ ಕಠಿಣ ಕ್ರಮ ಗ್ಯಾರಂಟಿ ತೆಗೆದುಕೊಳ್ಳುತ್ತೇವೆ. ಶೇ 10ಕ್ಕೂ ಹೆಚ್ಚು ಸೋಂಕು ಇರೋ ಜಿಲ್ಲೆಗಳು ಗಂಭೀರವಾಗಿ ಪರಿಗಣಿಸಬೇಕು. ಶೇ 5ರ ಒಳಗೆ ಸೋಂಕು ಇರುವ ಜಿಲ್ಲೆಗಳು ಎಚ್ಚರ ತಪ್ಪಬಾರದು. ಹೆಚ್ಚು ಹೆಚ್ಚು ಟೆಸ್ಟ್​ಗಳನ್ನು ಮಾಡಲು ಕ್ರಮವಹಿಸುತ್ತವೆ ಎಂದು ತಿಳಿಸಿದರು.

ಅಂತರ್​ರಾಜ್ಯ, ಹೊರ ದೇಶದಿಂದ ಬರುವವರಿಗೆ ಕಡ್ಡಾಯವಾಗಿ ಚೆಕ್ ಪಾಯಿಂಟ್​ಗಳಲ್ಲಿ ಟೆಸ್ಟ್ ಮಾಡುತ್ತವೆ. ಒಂದು ಗ್ರಾಮದಲ್ಲಿ 5 ಸೋಂಕಿತರು ಕಂಡು ಬಂದರೆ ಆ ಗ್ರಾಮವನ್ನೆ ಸೀಲ್​ಡೌನ್ ಮಾಡಲಾಗುವುದು. ಗ್ರಾಮೀಣ ಭಾಗದಲ್ಲಿ ಸೋಂಕು ಬಂದ ವ್ಯಕ್ತಿಯನ್ನು ಕೂಡಲೇ ಕೋವಿಡ್ ಕೇರ್ ಸೆಂಟರ್​ಗೆ ಸೇರಿಸಬೇಕು ಎಂದರು.

ಚಿಕ್ಕಮಗಳೂರಿನಲ್ಲಿ ಕೊರೊನಾ ಕಂಟ್ರೋಲ್​ಗೆ ಬರಲಿದೆ:

ಎಚ್.ಎಲ್.ಎಚ್. ಒಂದೋ- ಎರಡೋ ಪ್ರಕರಣ ಬಂದಿರಬಹುದು. ಜನರಲ್ ಆಗಿ ಎಲ್ಲಿಯೂ ಬಂದಿಲ್ಲ. ಮಕ್ಕಳಲ್ಲಿ ಕೋವಿಡ್ ಗುಣ ಹೊಂದಿದ್ದ ನಂತರ ಬರೋ ಲಕ್ಷಣವಲ್ಲ ಎಂದು ಚಿಕ್ಕಮಗಳೂರಿನಲ್ಲಿ ಆರೋಗ್ಯ ಸಚಿವ ಸುಧಾಕರ್ ಹೇಳಿಕೆ ನೀಡಿದ್ದಾರೆ. ಚಿಕ್ಕಮಗಳೂರಲ್ಲಿ ಮೊದಲನೇ ಅಲೆಯಲ್ಲೂ ತಡವಾಗಿ ಪಾಸಿಟಿವಿಟಿ ಹೆಚ್ಚಾಗಿತ್ತು. ತಡವಾಗಿ ಅದೂ ಕೂಡ ಕಡಿಮೆಯಾಗಿತ್ತು. ಇನ್ನ ಎರಡು ವಾರದಲ್ಲಿ ಜಿಲ್ಲೆಯಲ್ಲಿ ಕೊರೊನಾ ಕಂಟ್ರೋಲ್​ಗೆ ಬರಲಿದೆ. ಅನೇಕ ಕ್ರಮ ತೆಗೆದುಕೊಂಡಿದ್ದೇವೆ ಶೇ 5 ಕ್ಕಿಂತ ಕಡಿಮೆಯಾಗುತ್ತೆ. ಜೂನ್ 21ರ ವರೆಗೆ ಕಾಫಿನಾಡಲ್ಲಿ ಯಥಾ ಪ್ರಕಾರ ಲಾಕ್​ಡೌನ್ ಮುಂದುವರೆಯುತ್ತೆ ಎಂದು ಚಿಕ್ಕಮಗಳೂರಿನಲ್ಲಿ ಸಚಿವ ಸುಧಾಕರ್ ಹೇಳಿದರು.

ABOUT THE AUTHOR

...view details