ಕರ್ನಾಟಕ

karnataka

ETV Bharat / state

ದಯವಿಟ್ಟು ಮುಷ್ಕರ ಕೈಬಿಡಿ, ನಾಗರಿಕಸ್ನೇಹಿ ಆಡಳಿತಕ್ಕೆ ಸಹಕರಿಸಿ: ಸಚಿವ ಸುಧಾಕರ್ - ಸಾರಿಗೆ ಮುಷ್ಕರದ ಬಗ್ಗೆ ಸಚಿವ ಸುಧಾಕರ್ ಹೇಳಿಕೆ

ಕಾಲಕಾಲಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ನೌಕರರ ಬೇಡಿಕೆಗಳಿಗೆ ಸ್ಪಂದಿಸಿದ್ದಾರೆ. ಕೋವಿಡ್​ನಿಂದಾಗಿ ಆರ್ಥಿಕ ಸಂಕಷ್ಟವಾದಾಗಲೂ ನೌಕರರ ಬದುಕು, ಅವರ ಕುಟುಂಬದ ಹಿತಕ್ಕಾಗಿ ಒಟ್ಟು 1,953.45 ಕೋಟಿ ರೂ. ನಷ್ಟು ವೇತನವನ್ನು ಪಾವತಿಸಲಾಗಿದೆ. ವೇತನ ಬಾಕಿ ಇಟ್ಟುಕೊಂಡು ನೌಕರರು ಸಂಕಷ್ಟಕ್ಕೆ ಸಿಲುಕಿಸುವಂತಹ ಯಾವುದೇ ಕೆಲಸವನ್ನು ಸರ್ಕಾರ ಮಾಡಿಲ್ಲ. ನಾಗರಿಕ ಸ್ನೇಹಿ ಆಡಳಿತಕ್ಕೆ ಸಹಕರಿಸಬೇಕು ಎಂದು ಸಚಿವರು ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿದ್ದಾರೆ.

ಸಚಿವ ಡಾ.ಕೆ.ಸುಧಾಕರ್
ಸಚಿವ ಡಾ.ಕೆ.ಸುಧಾಕರ್

By

Published : Apr 9, 2021, 1:00 PM IST

ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ನಮ್ಮ ರಾಜ್ಯ ಸರ್ಕಾರವು ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಗಾಗಲೇ ಈಡೇರಿಸಿದೆ. ಇನ್ನೂ ಒಂದು ಬೇಡಿಕೆಯನ್ನು ಪರಿಶೀಲಿಸಲಾಗುತ್ತಿದೆ. ಸರ್ಕಾರ ಈ ರೀತಿ ನೌಕರರಿಗೆ ಸ್ಪಂದಿಸಿರುವುದನ್ನು ಗಮನಿಸಿ ಮುಷ್ಕರ ಕೈ ಬಿಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ನೌಕರರಿಗೆ ಮನವಿ ಮಾಡಿದ್ದಾರೆ.

ಸಾರಿಗೆ ಸಂಸ್ಥೆಯ ನೌಕರರು ಶ್ರಮಜೀವಿಗಳಾಗಿದ್ದು, ಸಾರ್ವಜನಿಕ ಸೇವೆಗಾಗಿ ಬಹಳ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸರ್ಕಾರ ಹಾಗೂ ನೌಕರರ ಪರಸ್ಪರ ಕೊಡು ಕೊಳ್ಳುವಿಕೆಗಳಿಂದಾಗಿ ರಾಜ್ಯದ ಜನತೆಗೆ ಉತ್ತಮ ರಸ್ತೆ ಸಾರಿಗೆ ಸೇವೆ ಒದಗಿಸಲಾಗುತ್ತಿದೆ. ಕಾಲಕಾಲಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ನೌಕರರ ಬೇಡಿಕೆಗಳಿಗೆ ಸ್ಪಂದಿಸಿದ್ದಾರೆ. ಕೋವಿಡ್​ನಿಂದಾಗಿ ಆರ್ಥಿಕ ಸಂಕಷ್ಟವಾದಾಗಲೂ ನೌಕರರ ಬದುಕು, ಅವರ ಕುಟುಂಬದ ಹಿತಕ್ಕಾಗಿ ಒಟ್ಟು 1,953.45 ಕೋಟಿ ರೂ. ನಷ್ಟು ವೇತನವನ್ನು ಪಾವತಿಸಲಾಗಿದೆ. ವೇತನ ಬಾಕಿ ಇಟ್ಟುಕೊಂಡು ನೌಕರರು ಸಂಕಷ್ಟಕ್ಕೆ ಸಿಲುಕಿಸುವಂತಹ ಯಾವುದೇ ಕೆಲಸವನ್ನು ಸರ್ಕಾರ ಮಾಡಿಲ್ಲ. ನಾಗರಿಕ ಸ್ನೇಹಿ ಆಡಳಿತಕ್ಕೆ ಸಹಕರಿಸಬೇಕು ಎಂದು ಸಚಿವರು ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿದ್ದಾರೆ.

2020 ರ ಡಿಸೆಂಬರ್ ನಲ್ಲಿ ನೌಕರರು 4 ದಿನಗಳ ಕಾಲ ಮುಷ್ಕರ ಮಾಡಿದ್ದರು. ಆ ಸಮಯದಲ್ಲಿ 10 ಬೇಡಿಕೆಗಳಲ್ಲಿ, 9 ಬೇಡಿಕೆ ಈಡೇರಿಸುವುದಾಗಿ ಸರ್ಕಾರವು ಸಾರಿಗೆ ನೌಕರರಿಗೆ ಭರವಸೆ ನೀಡಿತ್ತು. ನಂತರ ಕೊಟ್ಟ ಮಾತಿನಂತೆಯೇ ನಡೆದುಕೊಂಡು ನಮ್ಮ ಸರ್ಕಾರ, 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಡೇರಿಸಿದೆ. ಆದರೆ 6 ನೇ ವೇತನ ಆಯೋಗದ ಶಿಫಾರಸುಗಳನ್ನು ಪರಿಗಣಿಸುವಂತೆ ಕೋರಿದ ಬೇಡಿಕೆಯನ್ನು ಇನ್ನೂ ಪರಿಶೀಲಿಸಲಾಗುತ್ತಿದೆ. ಈ ಬಗ್ಗೆ ಸರ್ಕಾರವು ಆರ್ಥಿಕ ಅಂಶಗಳನ್ನು ಪರಿಗಣಿಸಿ ತೀರ್ಮಾನಿಸಬೇಕಿದೆ. ಇದಕ್ಕಾಗಿ ಸಮಿತಿ ಕೂಡ ರಚನೆ ಮಾಡಿದ್ದು, ಈ ಸಮಿತಿಯು 6 ಸಭೆಗಳನ್ನು ನಡೆಸಿ ಚರ್ಚೆ ಮಾಡಿದೆ. ಇಷ್ಟೆಲ್ಲ ಕ್ರಮ ವಹಿಸಿದ ಬಳಿಕವೂ ನೌಕರರು ಮುಷ್ಕರ ನಡೆಸುವುದು ಸರಿಯ. ಆದ್ದರಿಂದ ನೌಕರರು ಮುಷ್ಕರ ಬಿಟ್ಟು ಸರ್ಕಾರಕ್ಕೆ ಸಹಕರಿಸಬೇಕು ಎಂದು ಸಚಿವರು ಕೋರಿದ್ದಾರೆ.

ಇದನ್ನೂ ಓದಿ:ಸಾರಿಗೆ ನೌಕರರ ಮುಷ್ಕರ ಕುತಂತ್ರ ವ್ಯಕ್ತಿಗಳ ಷಡ್ಯಂತ್ರ: ಈಶ್ವರಪ್ಪ

ಸಾರಿಗೆ ನೌಕರರು ಯಾರದ್ದೇ ಮಾತಿಗೆ ಕಿವಿಗೊಡದೆ ಸರ್ಕಾರವು ಕೈಗೊಂಡಿರುವ ಕ್ರಮಗಳನ್ನು ಗಮನಿಸಬೇಕು. ಸರ್ಕಾರವು ನೌಕರರಿಗಾಗಿ ಕೈಗೊಂಡಿರುವ ಕ್ರಮಗಳನ್ನು ಸಾರ್ವಜನಿಕರು ಕೂಡ ಗಮನಿಸಬೇಕು ಎಂದು ಸಚಿವರು ಹೇಳಿದ್ದಾರೆ.

For All Latest Updates

TAGGED:

ABOUT THE AUTHOR

...view details