ಕರ್ನಾಟಕ

karnataka

ETV Bharat / state

ಭದ್ರತೆ ಕೋರಿ ಸ್ಪೀಕರ್​ಗೆ​​ ಮನವಿ ಮಾಡಿದ ಶಾಸಕ ಅಖಂಡ ಶ್ರೀನಿವಾಸಮೂರ್ತಿ

ಪುಲಕೇಶಿನಗರ ಕ್ಷೇತ್ರದ ಕಾಂಗ್ರೆಸ್​​ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಇಂದು ವಿಧಾನಸೌಧಕ್ಕೆ ಭೇಟಿ ನೀಡಿ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಬಳಿ ರಕ್ಷಣೆ ಕೋರಿ ಮನವಿ ಮಾಡಿದ್ದಾರೆ.

By

Published : Aug 25, 2020, 8:46 PM IST

MLA Akhanda SrinivasMurth meets speaker
ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಹೇಳಿಕೆ

ಬೆಂಗಳೂರು: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಿ, ರಕ್ಷಣೆ ಕೋರಿ ಮನವಿ ಸಲ್ಲಿಸಿರುವುದಾಗಿ ಪುಲಕೇಶಿನಗರ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ತಿಳಿಸಿದ್ದಾರೆ.

ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಹೇಳಿಕೆ
ವಿಧಾನಸೌಧದಲ್ಲಿ ಇಂದು ಸಂಜೆ ಸ್ಪೀಕರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ನನಗೆ ಅನ್ಯಾಯ ಆಗಿದೆ, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಸ್ಪೀಕರ್​​​ ಅವರಿಗೆ ಮನವಿ ಮಾಡಲಾಗಿದೆ ಎಂದ್ರು. ಈ ವೇಳೆ ಅವರು ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಕ್ಷೇತ್ರದಲ್ಲಿ ಮತ್ತಷ್ಟು ಕೆಲಸ ಮಾಡಬೇಕಾಗಿರುವುದರಿಂದ ಭದ್ರತೆ ಒದಗಿಸುವಂತೆ ಮನವಿ ಮಾಡಲಾಗಿದೆ. ಈಗಾಗಲೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಭದ್ರತೆ ಕೋರಲಾಗಿದ್ದು, ಅವರು ಭದ್ರತೆ ಒದಗಿಸಿದ್ದಾರೆ ಎಂದರು. ರಾಜ್ಯದಲ್ಲಿ 224 ಶಾಸಕರಿದ್ದಾರೆ, ಅವರಲ್ಲಿ ನಾನು ಒಬ್ಬ. ಯಾರಿಗೂ ಅನ್ಯಾಯ ಆಗಬಾರದು. ಅದೇ ರೀತಿ ಸಾಮಾನ್ಯ ಜನರಿಗೂ ಅನ್ಯಾಯ ಆಗಬಾರದು ಎಂದು ಮನವಿ ಮಾಡಲಾಗಿದೆ ಎಂದು ಹೇಳಿದರು. ತನಿಖೆಯಾಗಲಿ, ತಪ್ಪಿತಸ್ಥರು ಯಾರೇ ಇದ್ದರೂ ಶಿಕ್ಷೆಯಾಗಬೇಕು ಎಂದು ಮನವಿ ಮಾಡಲಾಗಿದೆ ಎಂದರು.

ಫೇಸ್​ಬುಕ್​ ಪೋಸ್ಟ್​ ವಿಚಾರವಾಗಿ ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿಯಲ್ಲಿ ಉಂಟಾದ ಗಲಭೆಯಲ್ಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ನಿವಾಸಕ್ಕೆ ಬೆಂಕಿ ಹಚ್ಚಲಾಗಿತ್ತು.

For All Latest Updates

ABOUT THE AUTHOR

...view details