ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ಮೂವರು ಮುಖ್ಯಮಂತ್ರಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ: ಸಿಎಂ ವಿರುದ್ಧ ಶಾಸಕ ಸಂಗಮೇಶ್ ಗುಡುಗು - Sangamesh outrage on cm family

ಪ್ರತಿ ಕೆಲಸದಲ್ಲಿಯೂ ಸಿಎಂ ಯಡಿಯೂರಪ್ಪ ಕುಟುಂಬದ ಸದಸ್ಯರು ತಲೆ ತೂರಿಸುತ್ತಾರೆ. ಇಬ್ಬರು ಪುತ್ರರಲ್ಲದೇ ಓರ್ವ ಪುತ್ರಿ ಕೂಡ ರಾಜಕೀಯ ಚಟುವಟಿಕೆಗಳಲ್ಲಿ ತಲೆ ತೂರಿಸುತ್ತಿದ್ದಾರೆ ಎಂದು ಭದ್ರಾವತಿ ಶಾಸಕ ಸಂಗಮೇಶ್ ಆರೋಪ ಮಾಡಿದರು.

MLA Sangamesh
ಭದ್ರಾವತಿ ಶಾಸಕ ಸಂಗಮೇಶ್

By

Published : Mar 4, 2021, 12:52 PM IST

Updated : Mar 4, 2021, 1:36 PM IST

ಬೆಂಗಳೂರು: ರಾಜ್ಯದಲ್ಲಿ ಮೂವರು ಮುಖ್ಯಮಂತ್ರಿಗಳು ಇದ್ದಾರೆ. ರಾಜ್ಯಕ್ಕೆ ಮೊದಲ ಮುಖ್ಯಮಂತ್ರಿ ಯಡಿಯೂರಪ್ಪ, ಎರಡನೇ ಮುಖ್ಯಮಂತ್ರಿ ವಿಜಯೇಂದ್ರ, ಶಿವಮೊಗ್ಗ ಜಿಲ್ಲೆಯ ಮುಖ್ಯಮಂತ್ರಿ ಸಂಸದ ರಾಘವೇಂದ್ರ ಎಂದು ಭದ್ರಾವತಿ ಶಾಸಕ ಸಂಗಮೇಶ್ ಅವರು ಸಿಎಂ ಕುಟುಂಬದ ವಿರುದ್ಧ ಗುಡುಗಿದ್ದಾರೆ.

ವಿಧಾನಸೌಧದಲ್ಲಿ ಸಿಎಂ ಕುಟುಂಬ ರಾಜಕಾರಣದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಪ್ರತಿ ಕೆಲಸದಲ್ಲಿಯೂ ಕುಟುಂಬ ಸದಸ್ಯರು ತಲೆ ತೂರಿಸುತ್ತಾರೆ. ಇಬ್ಬರು ಪುತ್ರರಲ್ಲದೇ ಓರ್ವ ಪುತ್ರಿ ಕೂಡ ರಾಜಕೀಯ ಚಟುವಟಿಕೆಗಳಲ್ಲಿ ತಲೆ ತೂರಿಸುತ್ತಿದ್ದಾರೆ ಎಂದು ಆರೋಪ ಮಾಡಿದರು.

ಭದ್ರಾವತಿ ಶಾಸಕ ಸಂಗಮೇಶ್ ಪ್ರತಿಕ್ರಿಯೆ

ಭದ್ರಾವತಿಯಲ್ಲಿ ಹೊನಲು ಬೆಳಕಿನ ಕಬಡ್ಡಿ ಪಂದ್ಯ ಆಯೋಜಿಸಿದ್ದೆವು. ಬಹುಮಾನ ಕೊಡುವ ವೇಳೆ ಆರ್​ಎಸ್​ಎಸ್ ಧರ್ಮ, ಜಾತಿ ಮುಂದಿಟ್ಟು ಕಿತಾಪತಿ ನಡೆಸಿದೆ. ಆಟದಲ್ಲಿ ಧರ್ಮ, ಜಾತಿ ರಾಜಕೀಯ ತಂದಿದ್ದಾರೆ. ಕೋಮು ಗಲಭೆ ಸೃಷ್ಟಿಗೆ ಮುಂದಾಗಿದ್ದರು. ಅವರನ್ನು ಅಂದು ಸಮಾಧಾನ ಮಾಡಿದ್ದೆವು. ಆದರೆ ಅಧಿಕಾರ ದುರ್ಬಳಕೆ ಮಾಡಿಕೊಂಡು ಅಟೆಂಪ್ಟ್​ ಟು ಮರ್ಡರ್ ಕೇಸ್ ಅನ್ನು ಸಿಎಂ ಅವರ ಕುಟುಂಬದವರು ನನ್ನ ವಿರುದ್ಧ ಹಾಕಿಸಿದ್ದಾರೆ ಎಂದು ಆರೋಪಿಸಿದರು.

ಓದಿ:ಕಬ್ಬಡಿ ಪಂದ್ಯಾವಳಿ ವೇಳೆ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ : ನಾಲ್ವರಿಗೆ ಗಾಯ

ಭದ್ರಾವತಿಯಲ್ಲಿ ಬಿಜೆಪಿಗೆ ಬೇರಿಲ್ಲ. ಅದಕ್ಕೆ ಕೋಮುಗಲಭೆ ಸೃಷ್ಟಿಸಲು ಹೊರಟಿದ್ದಾರೆ. ಒಬ್ಬ ಶಾಸಕನ ಮೇಲೂ ಪ್ರಕರಣ ದಾಖಲಿಸಿದ್ದಾರೆ. ಅವರ ವಿರುದ್ಧ ದೂರು ಕೊಟ್ಟರೆ ಅರೆಸ್ಟ್ ಮಾಡಿಲ್ಲ. ತಾಕತ್ತಿದ್ದರೆ ಈಶ್ವರಪ್ಪ ಅವರನ್ನು ಜೈಲಿಗೆ ಕಳಿಸಲಿ. ನಾವು ಅವರಂತೆ ಸಿಡಿ ಮಾಡಿಲ್ಲ, ಭ್ರಷ್ಟಾಚಾರ ಮಾಡಿಲ್ಲ, ಅನ್ಯಾಯ ಮಾಡಿಲ್ಲ ಎಂದು ಸಂಗಮೇಶ್​ ಕಿಡಿಕಾರಿದರು.

ಶಿವಮೊಗ್ಗದಲ್ಲಿ ಗಣಿ ಸ್ಫೋಟವಾಯ್ತು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಇನ್ನೂ ಸಿಕ್ಕಿಲ್ಲ. ನನ್ನ ಮೇಲೆ, ಕುಟುಂಬಸ್ಥರ ಮೇಲೆ ಹಲ್ಲೆ ಮಾಡಿದ್ದಾರೆ. ಈ ವಿಚಾರವನ್ನು ಇಂದು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ತಿಳಿಸಿದ್ದೇನೆ. ಈ ಚರ್ಚೆಯನ್ನು ಕೈಗೆತ್ತಿಕೊಳ್ಳುವುದಾಗಿ ನಾಯಕರು ಭರವಸೆ ನೀಡಿದ್ದಾರೆ ಎಂದರು.

Last Updated : Mar 4, 2021, 1:36 PM IST

ABOUT THE AUTHOR

...view details