ಬೆಂಗಳೂರು:ರಾಜರಾಜೇಶ್ವರಿನಗರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯದಲ್ಲಿ ಅಲ್ಲಿನ ನಿಲಯ ಪಾಲಕರು ಮತ್ತು ತಾಲೂಕು ಅಧಿಕಾರಿಗಳಿಂದ ಕಿರುಕುಳ ಮತ್ತು ದೌರ್ಜನ್ಯ ನಡೆಯುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಯನಗರ ಶಾಸಕಿ ಸೌಮ್ಯ ರೆಡ್ಡಿ ಅವರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಮನವಿ ಮಾಡಿದ್ದಾರೆ. ಸಚಿವರಿಗೆ ಬರೆದ ಪತ್ರದ ಸಾರಾಂಶ ಹೀಗಿದೆ..
ಬೆಂಗಳೂರು ನಗರದಲ್ಲಿರುವ ಆರ್.ಆರ್.ನಗರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹೆಣ್ಣು ಮಕ್ಕಳ ವಿದ್ಯಾರ್ಥಿ ನಿಲಯದಲ್ಲಿ ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಸ್ತವ್ಯ ಮಾಡುತ್ತಿದ್ದಾರೆ. ಇಲ್ಲಿನ ಉಸ್ತುವಾರಿ ವಹಿಸಿಕೊಂಡವರು ಪ್ರತಿನಿತ್ಯ ಶೌಚಾಲಯ ಹಾಗೂ ವಿದ್ಯಾರ್ಥಿ ನಿಲಯದ ಆವರಣ ಸ್ವಚ್ಛಗೊಳಿಸುವಂತೆ ವಿದಾರ್ಥಿನಿಯರನ್ನು ಪೀಡಿಸುತ್ತಾರೆ. ಅದನ್ನು ವಿರೋಧಿಸಿದಲ್ಲಿ ಶೌಚಾಲಯಗಳಿಗೆ ಬೀಗ ಹಾಕುತ್ತಾರೆ ಮತ್ತು ಕೊಠಡಿಗಳಿಗೆ ನೀಡುವ ವಿದ್ಯುತ್ ಕಡಿತಗೊಳಿಸುತ್ತಾರೆ. ಅಲ್ಲದೆ, ವಿದ್ಯಾರ್ಥಿನಿಯರೇ ಅಡುಗೆ ಮಾಡುವಂತೆ ಒತ್ತಾಯಿಸುತ್ತಾರೆ. ಜೊತೆಗೆ ನಿಲಯ ಪಾಲಕರು ಅವರ ಸ್ವಂತ ಸೇವೆಯನ್ನು ಮಾಡಿಸಿಕೊಳ್ಳುವುದು ಹಾಗೂ ವಿದ್ಯಾರ್ಥಿ ನಿಲಯದ ಕೆಲ ವಸ್ತುಗಳನ್ನು ಅಕ್ರಮವಾಗಿ ತಮ್ಮ ಮನೆಗೆ ಸಾಗಾಟ ಮಾಡಿಕೊಂಡಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾರೆ.
ಇದನ್ನೂ ಓದಿ:ಗಾಳಿಪಟ ದಾರಕ್ಕೆ ಸಿಲುಕಿ ಕಂಬದಲ್ಲಿ ಒದ್ದಾಡುತ್ತಿದ್ದ ಕಾಗೆ; ಪ್ರಾಣ ರಕ್ಷಿಸಿದ ಹೆಡ್ ಕಾನ್ಸ್ಟೇಬಲ್ಗೆ ಸನ್ಮಾನ