ಕರ್ನಾಟಕ

karnataka

ETV Bharat / state

ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ: ಎಸ್ಆರ್​​ಪಿ ಆರೋಪ - SR patil latest tweet

ಪ್ರತಿಪಕ್ಷಗಳನ್ನು ನೇರವಾಗಿ ಎದುರಿಸಲಾಗದ ಬಿಜೆಪಿ ಸಿಬಿಐ ಬಳಸಿಕೊಂಡು ಹೀನ ರಾಜಕಾರಣ ಮಾಡುತ್ತಿದೆ. ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್ ಆರ್​ ಪಾಟೀಲ್ ಟ್ವೀಟ್​ ಮಾಡಿದ್ದಾರೆ.

government
ಎಸ್ಆರ್​​ಪಿ ಆರೋಪ

By

Published : Feb 23, 2021, 11:32 AM IST

ಬೆಂಗಳೂರು: ಕೇಂದ್ರ ಸರ್ಕಾರ ಚುನಾವಣೆ ಸಂದರ್ಭ ಮತ್ತೊಮ್ಮೆ ತನ್ನ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್ ಆರ್​ ಪಾಟೀಲ್ ಗಂಭೀರ ಆರೋಪಿಸಿದ್ದಾರೆ.


ಟ್ವೀಟ್ ಮೂಲಕ ಬೇಸರ ವ್ಯಕ್ತಪಡಿಸಿರುವ ಅವರು, ಚುನಾವಣಾ ಸಂದರ್ಭದಲ್ಲಿ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಇದಕ್ಕೆ ನಿದರ್ಶನ ಎನ್ನುವಂತೆ ನರೇಂದ್ರ ಮೋದಿ ಸರ್ಕಾರ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರ ಕೋಲ್ಕತ್ತಾ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದೆ. ಇಷ್ಟು ದಿನ ಸುಮ್ಮನಿದ್ದ ಸಿಬಿಐ, ಚುನಾವಣೆ ಸಂದರ್ಭದಲ್ಲಿ ಜಾಗೃತವಾಗಿದ್ದೇಕೆ..? ಪ್ರತಿಪಕ್ಷಗಳನ್ನು ನೇರವಾಗಿ ಎದುರಿಸಲಾಗದ ಬಿಜೆಪಿ ಸಿಬಿಐ ಬಳಸಿಕೊಂಡು ಹೀನ ರಾಜಕಾರಣ ಮಾಡುತ್ತಿದೆ. ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ದೂರಿದ್ದಾರೆ.


ರೈತ ವಿರೋಧಿ ಸರ್ಕಾರ:

ಮತ್ತೊಂದು ಟ್ವೀಟ್​ನಲ್ಲಿ, ಕೇಂದ್ರದ ವಿವಾದಿತ ಕೃಷಿ ಕಾಯ್ದೆಗಳಿಗೆ ರೈತರಿಂದ ಭಾರಿ ವಿರೋಧದ ಬೆನ್ನಲ್ಲೇ ಇದೀಗ ಚಿತ್ರದುರ್ಗದ ಹಿರಿಯೂರಿನಲ್ಲಿ ಖಾಸಗಿ ಕೃಷಿ ಮಾರುಕಟ್ಟೆ ನಿರ್ಮಾಣಕ್ಕೆ ಸಿದ್ಧತೆಗಳು ನಡೆಯುತ್ತಿವೆ. ಹಿರಿಯೂರು ತಾಲೂಕಿನ ಹುಚ್ಚವ್ವನಹಳ್ಳಿಯ 106 ಎಕರೆ ಜಾಗದಲ್ಲಿ ಅಕ್ಷಯ ಫುಡ್ ಪಾರ್ಕ್ ಏಪ್ರಿಲ್ ತಿಂಗಳಿನಿಂದ ಕಾರ್ಯಾರಂಭವಾಗುವ ಸಾಧ್ಯತೆ ಇದೆ. 2010ರಲ್ಲಿ ನಿರ್ಮಾಣವಾದ ಈ ಪಾರ್ಕ್​ನಿಂದ ರೈತರು ಹಾಗೂ ಕೈಗಾರಿಕೋದ್ಯಮಿಗಳಿಗೆ ಅನುಕೂಲವಾಗಿಲ್ಲ. ಅಲ್ಲದೆ, ಸರ್ಕಾರ ವಿಧಿಸಿದ ಷರತ್ತುಗಳನ್ನು ಫುಡ್ ಪಾರ್ಕ್ ಪಾಲಿಸಿಲ್ಲ ಎಂಬ ಬಗ್ಗೆ ಸರ್ಕಾರಕ್ಕೆ ದೂರುಗಳು ಸಲ್ಲಿಕೆಯಾಗಿದ್ದವು. ಹೀಗಿದ್ದರೂ ವಿರೋಧದ ನಡುವೆಯೂ ಮಾರುಕಟ್ಟೆಯನ್ನು ಆರಂಭಿಸಲು ಸರ್ಕಾರ ಮುಂದಾಗಿದೆ. ರೈತ ವಿರೋಧಿ ಸರ್ಕಾರಕ್ಕೆ ಧಿಕ್ಕಾರ ಎಂದು ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ:ಜಿಲೆಟಿನ್ ಸ್ಫೋಟ ಪ್ರಕರಣ: ತಪ್ಪಿತಸ್ಥರು ಯಾರೇ ಆಗಲಿ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದ ಸಚಿವ ಸುಧಾಕರ್

ABOUT THE AUTHOR

...view details