ಕರ್ನಾಟಕ

karnataka

By

Published : Jul 27, 2020, 1:42 PM IST

ETV Bharat / state

ಬಿಜೆಪಿ ನಾಯಕರಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಡಿ.ಕೆ.ಸುರೇಶ್ ಕಿಡಿ

ಬಿಜೆಪಿ ದೇಶದ ಎಲ್ಲ ರಾಜ್ಯಗಳಲ್ಲಿಯೂ ತನ್ನದೇ ಸರ್ಕಾರ ತರುವುದಕ್ಕೆ ಪ್ರಯತ್ನ ನಡೆಸುತ್ತಿದೆ. ಇದಕ್ಕಾಗಿ ಬಿಜೆಪಿ ನಾಯಕರು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಕಗ್ಗೊಲೆ ಮಾಡುತ್ತಿದ್ದಾರೆ ಎಂದು ಸಂಸದ ಡಿ.ಕೆ.ಸುರೇಶ್ ಆರೋಪಿಸಿದ್ದಾರೆ.

MP DK Suresh outrage against BJP
ಬಿಜೆಪಿ ನಾಯಕರು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಕಗ್ಗೊಲೆ ಮಾಡುತ್ತಿದ್ದಾರೆ: ಡಿಕೆ ಸುರೇಶ್ ಕಿಡಿ

ಬೆಂಗಳೂರು: ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಧಕ್ಕೆ ವಿಚಾರ ಸಂಬಂಧ ಬಿಜೆಪಿ ನಾಯಕರ ವಿರುದ್ಧ ಸಂಸದ ಡಿ.ಕೆ.ಸುರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ನಾಯಕರು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಕಗ್ಗೊಲೆ ಮಾಡುತ್ತಿದ್ದಾರೆ: ಡಿ.ಕೆ.ಸುರೇಶ್ ಕಿಡಿ

ಈ ಸಂಬಂಧ ವಿಡಿಯೋ ಬಿಡುಗಡೆ ಮಾಡಿರುವ ಅವರು, ಪ್ರಜಾಪ್ರಭುತ್ವವನ್ನು ಕೊಲ್ಲುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ರಾಜಸ್ಥಾನದಲ್ಲಿ‌ ಚುನಾಯಿತ ಸರ್ಕಾರ ಉರುಳಿಸುವ ಕೆಲಸ ಮಾಡ್ತಿದೆ. ಸಂವಿಧಾನಕ್ಕೆ ಇಂದು ಧಕ್ಕೆ ಬಂದೊದಗಿದೆ. ಎಲ್ಲೆಲ್ಲಿ ಅವರ ಸರ್ಕಾರ ಇಲ್ಲವೋ ಅಲ್ಲೆಲ್ಲ ಪ್ರಯತ್ನ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ದೇಶದ ಎಲ್ಲ ರಾಜ್ಯಗಳಲ್ಲಿಯೂ ತನ್ನದೇ ಸರ್ಕಾರ ತರುವುದಕ್ಕೆ ಪ್ರಯತ್ನ ನಡೆಸುತ್ತಿದೆ. ಇದಕ್ಕಾಗಿ ಬಿಜೆಪಿ ನಾಯಕರು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಕಗ್ಗೊಲೆ ಮಾಡುತ್ತಿದ್ದಾರೆ. ಸಂವಿಧಾನವನ್ನ ಉಳಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದಿದ್ದಾರೆ.

ABOUT THE AUTHOR

...view details