ಕರ್ನಾಟಕ

karnataka

ಸಿಲಿಕಾನ್ ಸಿಟಿಯಲ್ಲಿ ಹಾಡುಹಗಲೇ ಕೊಲೆ,ಚಾಕು ಇರಿದು ಹಂತಕರು ಪರಾರಿ

ಸ್ಕೂಟರ್‌ನಲ್ಲಿ ಕೆಲಸದ ನಿಮಿತ್ತ ತೆರಳುತ್ತಿದ್ದ, ಯುವಕನನ್ನು ಹಿಂಬಾಲಿಸಿಕೊಂಡು ಬಂದ ಹಂತಕರ ತಂಡ ಚಾಕುವಿನಿಂದ ಕುತ್ತಿಗೆ ಇರಿದು ಪರಾರಿಯಾಗಿದೆ.

By

Published : Jun 6, 2019, 8:59 PM IST

Published : Jun 6, 2019, 8:59 PM IST

ಹಾಡು ಹಗಲೇ ಯುವನೊರ್ವನ ಕತ್ತಿಗೆ ಚಾಕು ಹಾಕಿ ಹತ್ಯೆ

ಬೆಂಗಳೂರು: ದುಷ್ಕರ್ಮಿಗಳ ತಂಡಯುವಕನೊಬ್ಬನ ಕತ್ತಿಗೆ ಚಾಕುವಿನಿಂದ ಇರಿದು ಹತ್ಯೆಗೈದ ಘಟನೆ ಕಮಲಾನಗರದ ಶಂಕರ್ ನಾಗ ಬಸ್ ನಿಲ್ದಾಣದ ಬಳಿ ನಡೆದಿದೆ.

ಖಾಸಗಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಹಿತೇಶ್ ಎಂಬ ಯುವಕ ಸ್ಕೂಟರ್‌ನಲ್ಲಿ ಕೆಲಸದ ನಿಮಿತ್ತ ತೆರಳುತ್ತಿದ್ದ ಎನ್ನಲಾಗಿದೆ. ಈ ವೇಳೆ ಯುವಕನನ್ನು ಹಿಂಬಾಲಿಸಿಕೊಂಡು ಬಂದ ಹಂತಕರ ತಂಡ, ಬೈಕ್ ಅಡ್ಡಗಟ್ಟಿ ಚಾಕುವಿನಿಂದ ಕುತ್ತಿಗೆಗೆ ಇರಿದು ಪರಾರಿಯಾಗಿದೆ.

ಈ ಕುರಿತು ಸ್ಥಳ ಪರಿಶೀಲನೆ ನಡೆಸಿದ ಬಸವೇಶ್ವರ ನಗರ ಪೊಲೀಸರು ಪರಿಚಯಸ್ಥರೇ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಘಟನೆ ನಡೆದ ಸುತ್ತಮುತ್ತ ಅಳವಡಿಸಿರುವ ಸಿಸಿಟಿವಿ ದೃಶ್ಯಾವಳಿ ಸಂಗ್ರಹಿಸಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ABOUT THE AUTHOR

...view details