ಕರ್ನಾಟಕ

karnataka

By

Published : Nov 2, 2020, 10:24 AM IST

ETV Bharat / state

ಬಿಬಿಎಂಪಿ ಮಾಜಿ ಸದಸ್ಯನಿಂದ ಕಾಂಗ್ರೆಸ್​ ಕಾರ್ಯಕರ್ತನಿಗೆ ಕೊಲೆ ಬೆದರಿಕೆ

ಬೆಂಗಳೂರಲ್ಲಿ ಕೊಲೆ ಬೆದರಿಕೆ ಆರೋಪ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ರಾಮಚಂದ್ರ ಎಂಬುವರಿಗೆ ಮಾಜಿ ಬಿಬಿಎಂಪಿ ಸದಸ್ಯ ಶ್ರೀನಿವಾಸ್ ಮೂರ್ತಿ ಹಾಗೂ ಸಂಗಡಿಗರು ಕೊಲೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.

ಬಿಬಿಎಂಪಿ ಮಾಜಿ ಸದಸ್ಯನಿಂದ ಕೈ ಕಾರ್ಯಕರ್ತನಿಗೆ ಕೊಲೆ ಬೆದರಿಕೆಬಿಬಿಎಂಪಿ ಮಾಜಿ ಸದಸ್ಯನಿಂದ ಕೈ ಕಾರ್ಯಕರ್ತನಿಗೆ ಕೊಲೆ ಬೆದರಿಕೆ
ಬಿಬಿಎಂಪಿ ಮಾಜಿ ಸದಸ್ಯನಿಂದ ಕೈ ಕಾರ್ಯಕರ್ತನಿಗೆ ಕೊಲೆ ಬೆದರಿಕೆ

ಬೆಂಗಳೂರು:ಆರ್​ ಆರ್​ ನಗರ ಉಪಚುನಾವಣೆಗೆ ಸಂಬಂಧಿಸಿದಂತೆ ಹಣ ಹಂಚಿದ್ದೀರಿ ಎಂದು ಆರೋಪಿಸಿ ಬಿಬಿಎಂಪಿ ಮಾಜಿ ಸದಸ್ಯ ಶ್ರೀನಿವಾಸ್ ಮೂರ್ತಿ ಹಾಗೂ ಸಂಗಡಿಗರು ಸೇರಿ ಕಾಂಗ್ರೆಸ್​ ಕಾರ್ಯಕರ್ತನಿಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಬಿಬಿಎಂಪಿ ಮಾಜಿ ಸದಸ್ಯನಿಂದ ಕೈ ಕಾರ್ಯಕರ್ತನಿಗೆ ಕೊಲೆ ಬೆದರಿಕೆ ಆರೋಪ

ಅ.31 ರಂದು ರಾತ್ರಿ ಮನೆಗೆ ತೆರಳುವಾಗ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ರಾಮಚಂದ್ರ ಎಂಬುವರನ್ನು ಹಿಂಬಾಲಿಸಿಕೊಂಡು ಮನೆಯವರೆಗೆ ತೆರಳಿದ ಶ್ರೀನಿವಾಸ್ ಮೂರ್ತಿ ಹಾಗೂ ಸಂಗಡಿಗರು, ರಾಮಚಂದ್ರ ಅವರನ್ನು ಮನೆಯಿಂದ ಹೊರಗೆಳೆದು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಅಲ್ಲದೇ ಆರ್​ ಆರ್​ ನಗರ ಚುನಾವಣೆಗೆ ಹಣ ಹಂಚಿದ್ದೀರಿ, ಎಲೆಕ್ಷನ್ ಮುಗಿದ ಮೇಲೆ ಏನ್ ಮಾಡ್ಬೇಕು ಗೊತ್ತು ಎಂದು ಕೊಲೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಲಾಗಿದೆ.

ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಈ ಕುರಿತು ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

TAGGED:

ABOUT THE AUTHOR

...view details