ಕರ್ನಾಟಕ

karnataka

ETV Bharat / state

ಸಂಗೀತ ವಿವಿ ಕುಲಪತಿ ಆಯ್ಕೆ ವಿವಾದ: ದಾಖಲೆ ಹಾಜರುಪಡಿಸಲು ಹೈಕೋರ್ಟ್ ನಿರ್ದೇಶನ - Dr. Nagesh Bettakode

ಸಂಗೀತ ವಿವಿಗೆ ಡಾ. ನಾಗೇಶ್ ಬೆಟ್ಟಕೋಟೆ ಅವರನ್ನು ಕುಲಪತಿಯಾಗಿ ನೇಮಕ ಮಾಡಿರುವ ಆದೇಶ ರದ್ದು ಕೋರಿ ಪ್ರಸನ್ನ ವಿದ್ಯಾಗಣಪತಿ ಮಹೋತ್ಸವ ಚಾರಿಟಬಲ್ ಟ್ರಸ್ಟ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

high-court
ಹೈಕೋರ್ಟ್

By

Published : Aug 2, 2021, 9:00 PM IST

ಬೆಂಗಳೂರು: ಮೈಸೂರಿನ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಕುಲಪತಿ ಆಯ್ಕೆಗೆ ಸಂಬಂಧಿಸಿದ ಶೋಧನಾ ಸಮಿತಿಯು 2020ರ ಸೆಪ್ಟೆಂಬರ್ 29ರಂದು ನಡೆಸಿರುವ ಸಭೆಯ ನಡಾವಳಿ ಹಾಗೂ ಇತರ ದಾಖಲೆಗಳನ್ನು ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಸಂಗೀತ ವಿವಿಗೆ ಡಾ. ನಾಗೇಶ್ ಬೆಟ್ಟಕೋಟೆ ಅವರನ್ನು ಕುಲಪತಿಯಾಗಿ ನೇಮಕ ಮಾಡಿರುವ ಆದೇಶ ರದ್ದು ಕೋರಿ ಪ್ರಸನ್ನ ವಿದ್ಯಾಗಣಪತಿ ಮಹೋತ್ಸವ ಚಾರಿಟಬಲ್ ಟ್ರಸ್ಟ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿದಾರರ ಪರ ವಕೀಲ ವೆಂಕಟೇಶ್ ದಳವಾಯಿ ಹಾಗೂ ಸರ್ಕಾರದ ಪರ ವಕೀಲರ ವಾದ ಆಲಿಸಿದ ಪೀಠ, ಕುಲಪತಿ ಆಯ್ಕೆಗೆ ಶೋಧನಾ ಸಮಿತಿ 2020ರ ಸೆಪ್ಟೆಂಬರ್ 29ರಂದು ನಡೆಸಿದ ಸಭೆಯ ನಡಾವಳಿಗಳು ಹಾಗೂ ಇತರ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿತು.

ಹಾಗೆಯೇ, ಉಳಿದ ಪ್ರತಿವಾದಿಗಳ ಪರ ವಕೀಲರ ವಾದವನ್ನು ಮುಂದಿನ ವಿಚಾರಣೆ ವೇಳೆ ಆಲಿಸಲಾಗುವುದು ಎಂದು ತಿಳಿಸಿದ ಪೀಠ ವಿಚಾರಣೆಯನ್ನು ಆಗಸ್ಟ್ 8ಕ್ಕೆ ಮುಂದೂಡಿತು.

ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಕುಲಪತಿಯಾಗಿ ನಾಗೇಶ್ ಬೆಟ್ಟಕೋಟೆ ಅವರನ್ನು 2021ರ ಜನವರಿ 22ರಂದು ರಾಜ್ಯಪಾಲರು ನೇಮಿಸಿದ್ದರು. ಆದರೆ, ಶೋಧನಾ ಸಮಿತಿಯ ಶಿಫಾರಸು ಪಟ್ಟಿಯಲ್ಲಿ ನಾಗೇಶ್ ಅವರ ಹೆಸರು ಇಲ್ಲದಿದ್ದರೂ ಅವರನ್ನು ನೇಮಿಸಿ ರಾಜ್ಯಪಾಲರು ಆದೇಶಿಸಿರುವುದು ಕಾನೂನು ಬಾಹಿರ ಕ್ರಮ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

ಓದಿ:ರಾಜ್ಯದಲ್ಲಿಂದು ಹೊಸದಾಗಿ 1,285 ಜನರಿಗೆ ಕೋವಿಡ್ ದೃಢ: 25 ಸೋಂಕಿತರ ಸಾವು

ABOUT THE AUTHOR

...view details