ಕರ್ನಾಟಕ

karnataka

ETV Bharat / state

ಬೊಕ್ಕಸ ಖಾಲಿಯಾಗಿಲ್ಲ ಲೂಟಿಯಾಗಿದೆ, ಬಿಎಸ್​ವೈ ಅದನ್ನು ಭರ್ತಿ ಮಾಡ್ತಿದ್ದಾರೆ: ನಳೀನ್​ ಕುಮಾರ್​ ಕಟೀಲ್ - nalin kumar katil bangalore press meet

ರಾಜ್ಯದ ಖಜಾನೆ ಖಾಲಿಯಾಗಿದೆ ಎಂದು ಸಿಎಂ ಯಡಿಯೂರಪ್ಪ ಅವರಾಗಲಿ,ವಿಜಯೇಂದ್ರ ಅವರಾಗಲಿ ಹೇಳಿಲ್ಲ. ಖಜಾನೆ ಖಾಲಿಯಾಗಿದ್ದರೆ 3000 ಕೋಟಿ ರೂ. ಖರ್ಚು ಮಾಡಲು ಆಗುತ್ತಿರಲಿಲ್ಲ. ಆದರೆ ಹಿಂದಿನ ಮೈತ್ರಿ ಸರ್ಕಾರದಲ್ಲಿ ಖಜಾನೆ ಲೂಟಿಯಾಗಿದೆ ಅದನ್ನೇ ಹೇಳಿದ್ದಾರೆ ಅಲ್ಲದೆ ಖಜಾನೆ ಭರ್ತಿ ಮಾಡುವ ಕೆಲಸವನ್ನು ಸಿಎಂ ಮಾಡುತ್ತಿದ್ದಾರೆ ಎಂದು ಕಟೀಲ್​ ಹೇಳಿದ್ದಾರೆ.

ನಳೀನ್​ ಕುಮಾರ್​ ಕಟೀಲ್

By

Published : Oct 5, 2019, 12:29 PM IST

ಬೆಂಗಳೂರು: ರಾಜ್ಯದ ಬೊಕ್ಕಸ ಖಾಲಿಯಾಗಿಲ್ಲ ಬದಲಾಗಿ ಲೂಟಿಯಾಗಿದೆ ಅದನ್ನು ಭರ್ತಿ ಮಾಡುವ ಕೆಲಸ ಯಡಿಯೂರಪ್ಪ ಮಾಡುತ್ತಿದ್ದಾರೆ ನಮ್ಮನ್ನು ಟೀಕಿಸುವ ಮೊದಲ ಕೊಡಗಿನಲ್ಲಿ ಮನೆ ಕಟ್ಟಿಸಿಕೊಟ್ಟಿದ್ದೀರಾ ಎನ್ನುವುದನ್ನು ಒಮ್ಮೆ ನೋಡಿಕೊಳ್ಳಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟಾಂಗ್ ನೀಡಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ನಳೀನ್​ ಕುಮಾರ್​ ಕಟೀಲ್

ಕಳದ ವರ್ಷ ಕೊಡಗಿನ ಸಂತ್ರಸ್ತರಿಗೆ ಮನೆ ಕಟ್ಟಿಸಿಕೊಡುವುದಾಗಿ ಕುಮಾರಸ್ವಾಮಿ ಅಂದಿದ್ರು ಪ್ರತಿ ಮನೆ ಕಟ್ಟಲು 97 ಸಾವಿರ ಕೊಡುತ್ತೇನೆ ಅಂದಿದ್ದರು ಆದರೆ ಇನ್ನೂ ಕೊಡಗಿನಲ್ಲಿ ಮನೆ ಕಟ್ಟಿಸಿಕೊಟ್ಟಿಲ್ಲ ಆದರೆ ಯಡಿಯೂರಪ್ಪ ಈಗಾಗಲೇ ಮನೆ ಕಟ್ಟಲು 1 ಲಕ್ಷ ರೂ.ಆರ್ ಟಿ ಜಿ ಎಸ್ ಮಾಡಿಸಿದ್ದಾರೆ ಹಾಗಾಗಿ ಕುಮಾರಸ್ವಾಮಿ ಅವರೇ ನೆರೆ ವಿಚಾರದಲ್ಲಿ ರಾಜಕೀಯ ಮಾಡಬೇಡಿ ನೆರೆ ಪರಿಹಾರ ಕಾರ್ಯ ಸಂಬಂಧ ಸರ್ಕಾರದ ಜೊತೆ ಸಹಕರಿಸಿ ಎಂದರು.

ರಾಜ್ಯದ ಖಜಾನೆ ಖಾಲಿಯಾಗಿದೆ ಎಂದು ಸಿಎಂ ಯಡಿಯೂರಪ್ಪ ಅವರಾಗಲಿ, ವಿಜಯೇಂದ್ರ ಅವರಾಗಲಿ ಹೇಳಿಲ್ಲ. ಖಜಾನೆ ಖಾಲಿಯಾಗಿದ್ದರೆ 3000 ಕೋಟಿ ರೂ. ಖರ್ಚು ಮಾಡಲು ಆಗುತ್ತಿರಲಿಲ್ಲ. ಆದರೆ ಹಿಂದಿನ ಮೈತ್ರಿ ಸರ್ಕಾರದಲ್ಲಿ ಖಜಾನೆ ಲೂಟಿಯಾಗಿದೆ ಅದನ್ನೇ ಹೇಳಿದ್ದಾರೆ ಅಲ್ಲದೆ ಖಜಾನೆ ಭರ್ತಿ ಮಾಡುವ ಕೆಲಸವನ್ನು ಸಿಎಂ ಮಾಡುತ್ತಿದ್ದಾರೆ ಎಂದರು.

ನಾನೂ ಕೂಡ ನೆರೆ ಪೀಡಿತ ಪ್ರದೇಶದಿಂದ ಬಂದವನೆ. ಹಿಂದೆಲ್ಲಾ ನೆರೆ ಬಂದಾಗ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡಿ ಪರಿಶೀಲಿಸುತ್ತಿದ್ದರು‌. ವರ್ಷಗಳು ಆದ ಮೇಲೆ ಪರಿಹಾರ ವಿತರಣೆ ಆಗಿದ್ದನ್ನೂ ಕಂಡಿದ್ದೇನೆ. ಆದರೆ ಇದೇ ಮೊದಲ ಬಾರಿಗೆ ಸಿಎಂ ಭೇಟಿ ನೀಡಿದ್ದರು. ಅಷ್ಟೇ ಅಲ್ಲ ತಕ್ಷಣವೇ ಪರಿಹಾರ ಕಾಮಗಾರಿಗಳನ್ನು ಕೈಗೊಂಡರು.ನೆರೆ ಬಂದಾಗ ನಮ್ಮ ಸಿಎಂ ಯಡಿಯೂರಪ್ಪ ಎಲ್ಲ ಭಾಗಗಳಿಗೆ ಭೇಟಿ ನೀಡಿ ಸಂತ್ರಸ್ತರ ಕಣ್ಣೀರು ಒರೆಸುವ ಕೆಲಸ ಮಾಡಿದ್ದಾರೆ.ಅಧಿಕಾರಿಗಳೂ ಸಹ ಶಕ್ತಿ ಮೀರಿ ಶ್ರಮಿಸಿದ್ದಾರೆ.ಅವರಿಗೆ ಅಭಿನಂದನೆಗಳು ಎಂದರು.

ಇದುವರೆಗೆ 3000 ಕೋಟಿ ರೂ.ಅನುದಾನ ನೀಡಿದೆ. ಮನೆ ನಿರ್ಮಾಣವಾಗುವವರೆಗೆ ಮನೆ ಬಾಡಿಗೆ ಪಾವತಿಸಿದ್ದಾರೆ.ಅಷ್ಟೇ ಅಲ್ಲ ಭೂ ಕುಸಿತದಿಂದ ಜಮೀನು ಕಳೆದುಕೊಂಡವರಿಗೆ ಪರ್ಯಾಯವಾಗಿ ಜಮೀನು ನೀಡುವ ತೀರ್ಮಾನ ಮಾಡಿದ್ದಾರೆ.ಇದಕ್ಕೆ ಕಂದಾಯ ಸಚಿವ ಆರ್.ಅಶೋಕ್ ರನ್ನು ಅಭಿನಂದಿಸುತ್ತೇನೆ ಎಂದರು.

ಕೇಂದ್ರ ಸರ್ಕಾರದಿಂದ ಅನುದಾನ ನಿರೀಕ್ಷೆ ಸಹಜ.ರಾಜ್ಯದಲ್ಲಿ ವಿವಿದ ದಿನಾಂಕಗಳಲ್ಲಿ ವಿವಿಧ ಭಾಗಗಳಲ್ಲಿ ನೆರೆ ಬಂದಿದೆ. ಹಾಗಾಗಿ ಒಮ್ಮೆಗೆ ಸರ್ವೆ ಮಾಡಲು ಸಾಧ್ಯವಾಗಿಲ್ಲ.ನೆರೆ ಇಳಿದ ಬಳಿಕ ಅಂದಾಜು ಸಮೀಕ್ಷೆ ಮಾಡಿ ಕೇಂದ್ರಕ್ಕೆ ವರದಿ ಕೊಟ್ಟಿದ್ದಾರೆ‌.ಸುಮಾರು 11ರಾಜ್ಯಗಳಲ್ಲಿ ಪ್ರವಾಹ ಉಂಟಾಗಿದೆ.ಹಾಗಾಗಿ ಕೇಂದ್ರ ಎಲ್ಲ ರಾಜ್ಯಗಳಿಂದ ವರದಿ ಪಡೆದು,ಸಮಾಲೋಚನೆ ಮಾಡಿ ಬಳಿಕ ಒಟ್ಟು ನಷ್ಟದಲ್ಲಿ ಶೇಕಡಾ 70ರಷ್ಟನ್ನು ಬಿಡುಗಡೆ ಮಾಡುತ್ತದೆ ಎಂದು ಪರಿಹಾರ ವಿಳಂಬಕ್ಕೆ ಕಾರಣ ನೀಡಿದರು

ಈಗ ರಾಜ್ಯಕ್ಕೆ 1200 ಕೋಟಿ ರೂ.ಬಿಡುಗಡೆ ಮಾಡಿದೆ.ಇದನ್ನು ಖರ್ಚು ಮಾಡಿ,ರಾಜ್ಯ ಸರ್ಕಾರ ಬಳಕೆ ಪ್ರಮಾಣಪತ್ರ ಕೊಟ್ಟ ಬಳಿಕ ಎರಡನೆ ಹಂತದಲ್ಲಿ ಹಣ ಬಿಡುಗಡೆಯಾಗುತ್ತದೆ.ಈಗಾಗಲೇ ರಾಜ್ಯ ಸರ್ಕಾರ 3000 ಕೋಟಿ ರೂ.ಖರ್ಚು ಮಾಡಿರುವುದರಿಂದ ಬಳಕೆ ಪ್ರಮಾಣಪತ್ರವನ್ನು ಬೇಗ ಕೊಡುವುದು ಸುಲಭವಾಗುತ್ತದೆ ಎಂದರು.

ನೆರೆಯಲ್ಲಿ ವೈಯಕ್ತಿಕ ಆಸ್ತಿ ನಷ್ಟವಾಗಿರುವ ಶಾಸಕರು ಮತ್ತು ಸಂಸದರು ಪರಿಹಾರದ ಹಣವನ್ನು ಬಿಟ್ಟುಕೊಡಿ ಎಂದು ಸೂಚನೆ ನೀಡಲು ಸಾಧ್ಯವಿಲ್ಲ.ಆದರೆ ಅವರಾಗಿಯೇ ಅರಿತುಕೊಂಡು ಪರಿಹಾರವನ್ನು ಬಿಟ್ಟುಕೊಟ್ಟರೆ ಉತ್ತಮ ಎಂದು ಕಟೀಲ್ ಅಭಿಪ್ರಾಯಪಟ್ಟರು.

ಪಕ್ಷದ ಶಿಸ್ತು ಮತ್ತು ನಿಯಮದ ಅಡಿಯಲ್ಲಿ ಎಲ್ಲರು ಸಂಯಮದಿಂದ ವರ್ತಿಸಬೇಕಾಗುತ್ತದೆ‌.ಅದಾಗದಿದ್ದರೆ ಕೆಲವೊಮ್ಮೆ ವಿವರಣೆ ಕೇಳಬೇಕಾಗುತ್ತದೆ ಹಾಗಾಗಿ ಯತ್ನಾಳ್ ರಿಂದಲೂ ಸ್ಪಷ್ಟನೆ ಕೇಳಲಾಗಿದೆ ಎಂದರು.

ABOUT THE AUTHOR

...view details