ಬೆಂಗಳೂರು:ತುರ್ತು ಕೇಬಲ್ ದುರಸ್ತಿ ಕಾಮಗಾರಿ ಸಂಬಂಧ ಒಂದು ವಾರ ರಾಷ್ಟ್ರೀಯ ಹೆದ್ದಾರಿ ಪೀಣ್ಯ ಮೇಲ್ಸೇತುವೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ನಗರ ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.
ಪೀಣ್ಯ ಸಂಚಾರ ಪೊಲೀಸ್ ಠಾಣೆಯ ಸರಹದ್ದಿನ ರಾಷ್ಟ್ರೀಯ ಹೆದ್ದಾರಿ-4 ಪೀಣ್ಯ ಎಲಿವೇಟೆಡ್ ಹೆದ್ದಾರಿ( ಡಾ.ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ)ಯ ಪಿಲ್ಲರ್ ನಂ-102 ಮತ್ತು 103ರ ಮದ್ಯೆ 8ನೇ ಮೈಲಿಯ ಸ್ವಾತಿ ಪೆಟ್ರೋಲ್ ಬಂಕ್ ಬಳಿ ಪ್ಲೈಓವರ್ಗೆ ಅಳವಡಿಸಿರುವ ಕೇಬಲ್ ಅನ್ನು ತುರ್ತಾಗಿ ದುರಸ್ತಿ ಮಾಡುವ ಅವಶ್ಯಕತೆ ಇದೆ.
ದುರಸ್ತಿ ಕಾರ್ಯ ಕೈಗೊಳ್ಳಲು ಶನಿವಾರದಿಂದ ಒಂದು ವಾರದವರೆಗೆ ಪೀಣ್ಯ ಮೇಲ್ಸೇತುವೆಯಲ್ಲಿ ಸಂಪೂರ್ಣ ವಾಹನ ಸಂಚಾರ ನಿರ್ಬಂಧಿಸಿ ದುರಸ್ತಿಗೆ ಅವಕಾಶ ಮಾಡಿಕೊಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು ಮನವಿ ಮಾಡಿದ್ದಾರೆ.