ಬೆಂಗಳೂರು:ಚಿತ್ರನಟ ಚಿರಂಜೀವಿ ಸರ್ಜಾ ಸಾವನ್ನಪ್ಪಿದ್ದ ವೇಳೆ ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಪಾರ್ಥಿವ ಶರೀರ ನೋಡಲು ಅಭಿಮಾನಿಗಳು ಆಗಮಿಸಿದ್ದರು. ಅಷ್ಟೇ ಅಲ್ಲದೆ, ಸರ್ಜಾ ಅಭಿಮಾನಿಗಳು ಕೆಲವರು ಮಾಸ್ಕ್ ಧರಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಸರ್ಜಾ ಕುಟುಂಬ ಹಾಗೂ ಅಭಿಮಾನಿಗಳ ವಿರುದ್ಧ ಜಯನಗರ, ತಲಘಟ್ಟಪುರ, ಕುಮಾರಸ್ವಾಮಿ ಲೇಔಟ್ ಹಾಗೂ ಬನಶಂಕರಿ ಠಾಣಾ ವ್ಯಾಪ್ತಿಯಲ್ಲಿ ಎನ್ಡಿಎಂಎ ಕಾಯ್ದೆ ಅನ್ವಯ ಪ್ರಕರಣ ದಾಖಲಾಗಿದೆ.
ಚಿತ್ರನಟ ಚಿರಂಜೀವಿ ಸರ್ಜಾ ಅನೇಕ ಅಭಿಮಾನಿಗಳನ್ನು ಹೊಂದಿರುವ ಕಾರಣದಿಂದ ನಗರ ಪೋಲಿಸ್ ಆಯುಕ್ತ ಭಾಸ್ಕರ್ ರಾವ್ ಅವರು ಕೆಲ ನಿಯಮಗಳನ್ನು ವಿಧಿಸಿ ಅನುಮತಿ ನೀಡಿದ್ದರು. ಆದರೆ ಪೊಲೀಸರು ವಿಧಿಸಿದ ನಿಯಮವನ್ನು ಸರ್ಜಾ ಅಭಿಮಾನಿಗಳು ಉಲ್ಲಂಘಿಸಿದ್ದಾರೆ.