ಕರ್ನಾಟಕ

karnataka

ದೇವೇಗೌಡರು ದೆಹಲಿ ಗದ್ದುಗೆ ಏರಿದ್ದ ಈ ದಿನಕ್ಕೆ ಇಂದು 25 ವರ್ಷ: ಟ್ವೀಟ್​​ನಲ್ಲಿ ಸ್ಮರಿಸಿದ ಮೊಮ್ಮಗ

By

Published : Jun 1, 2020, 7:44 PM IST

Updated : Jun 1, 2020, 8:04 PM IST

ಮಣ್ಣಿನ ಮಗ, ಜಿಡಿಎಸ್ ವರಿಷ್ಠ ಹೆಚ್​.ಡಿ. ದೇವೇಗೌಡರು ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಿ ಇಂದಿಗೆ 25 ವರ್ಷ ಕಳೆದಿದೆ. ಈ ಸಂಭ್ರಮದಲ್ಲಿ ಅವರ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಸೋಷಿಯಲ್ ಮೀಡಿಯಾದಲ್ಲಿ ಟ್ವೀಟ್​ ಮಾಡುವ ಮೂಲಕ ಶುಭಾಶಯ ಕೋರಿದ್ದಾರೆ.

Nikhil Kumaraswamy praised Deve Gowda's  achievement
Tweet on sನಿಖಿಲ್ ಕುಮಾರಸ್ವಾಮಿ ಟ್ವೀಟ್ocial media

ಬೆಂಗಳೂರು :ಭಾರತದ ಹಾಗೂ ಈ ಕನ್ನಡ ಮಣ್ಣಿನ ಇತಿಹಾಸ ಎಂದೂ ಮರೆಯದ ಸಾಧನೆ ಮಾಡಿರುವ ಹೆಚ್.ಡಿ. ದೇವೇಗೌಡ ಅವರು ದೆಹಲಿಯ ಗದ್ದುಗೆ ಏರಿ ಇಂದಿಗೆ (ಜೂ.1 ಕ್ಕೆ ) 25 ವರ್ಷಗಳಾದವು ಎಂದು ಗೌಡರ ಮೊಮ್ಮಗ, ನಟ ಹಾಗೂ ಜೆಡಿಎಎಸ್​ನ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಮರಿಸಿಕೊಂಡಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಟ್ವೀಟ್

ಈ ಕುರಿತು ತಮ್ಮ ಟ್ವೀಟ್ ಖಾತೆಯಲ್ಲಿ ಇಂದು ತಾತ (ದೇವೇಗೌಡ) ಅವರ ಬಗ್ಗೆ ಹಂಚಿಕೊಂಡಿದ್ದಾರೆ. ಭಾರತದ ಹಾಗೂ ಈ ಕನ್ನಡ ಮಣ್ಣಿನ ಇತಿಹಾಸ ಎಂದೂ ಮರೆಯದ ಸಾಧನೆ ಮಾಡಿರುವ @H_D_Devegowda ದೆಹಲಿಯ ಗದ್ದುಗೆ ಏರಿ ಇಂದಿಗೆ 25 ವರ್ಷಗಳಾದವು. ಸಾಮಾನ್ಯ ರೈತ ಕುಟುಂಬದಲ್ಲಿ ಜನಿಸಿದರೂ ಅತ್ಯುನ್ನತ ಹುದ್ದೆ ಏರಿದ ಈ ಅಪ್ರತಿಮ ಸಾಧನೆ ಪ್ರತಿಯೊಬ್ಬ ಕನ್ನಡಿಗನಿಗೂ ಸ್ಪೂರ್ತಿಯಾಗಲಿ ಎಂದು ಹೇಳಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಟ್ವೀಟ್

ಅನಿರೀಕ್ಷಿತವಾಗಿ ದೇವೇಗೌಡರು 1996 ಜೂ. 1 ರಂದು ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ಕರ್ನಾಟಕದಿಂದ ಪ್ರಧಾನಿಯಾದ ಏಕೈಕ ರಾಜಕಾರಣಿ ಎಂಬ ಹೆಗ್ಗಳಿಕೆಗೆ ದೇವೇಗೌಡರು ಪಾತ್ರರಾಗಿದ್ದಾರೆ. ಕೇವಲ 10 ತಿಂಗಳ ಕಾಲ ಅಧಿಕಾರ ನಡೆಸಿದ ಗೌಡರು, ಎಲ್ಲರ ಹುಬ್ಬೇರಿಸುಂತೆ ಕಾರ್ಯ ನಿರ್ವಹಿಸಿದ್ದರು.

ನಿಖಿಲ್ ಕುಮಾರಸ್ವಾಮಿ ಟ್ವೀಟ್
Last Updated : Jun 1, 2020, 8:04 PM IST

ABOUT THE AUTHOR

...view details