ಕರ್ನಾಟಕ

karnataka

ETV Bharat / state

ದೇಸಿ ಕೊರೊನಾ ಲಸಿಕೆ ಕುರಿತು ವಿನಾ ಕಾರಣ ಟೀಕೆ ಬೇಡ: ಸಚಿವ ಸುಧಾಕರ್ - Minister Sudhakar refuses to comment on coronavirus vaccine

ಯಾರೂ ಕೂಡ ಲಸಿಕೆಯ ಬಗ್ಗೆ ವಿನಾ ಕಾರಣ ಟೀಕಿಸಬಾರದು. ಈ ಮೂಲಕ ವಿಜ್ಞಾನಿಗಳ ಪರಿಶ್ರಮಕ್ಕೆ ಧಕ್ಕೆ ತರಬಾರದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಮನವಿ ಮಾಡಿದ್ದಾರೆ.

minister-sudhakar
ಸಚಿವ ಸುಧಾಕರ್

By

Published : Jan 5, 2021, 5:55 PM IST

ಬೆಂಗಳೂರು: ನಮ್ಮ ದೇಶದ್ದೇ ಆದ ಭಾರತ್ ಬಯೋಟೆಕ್ ಕಂಪನಿ ಕೊರೊನಾ ಲಸಿಕೆ ಅಭಿವೃದ್ಧಿಪಡಿಸಿದೆ. ಈ ಕುರಿತು ವಿನಾ ಕಾರಣ ಟೀಕೆ ಮಾಡುವ ಮೂಲಕ ವಿಜ್ಞಾನಿಗಳಿಗೆ ಅಗೌರವ ತೋರಬಾರದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಮನವಿ ಮಾಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಚಿವರು, ಕೋವಿಡ್ ಸಾಂಕ್ರಾಮಿಕ ವಿರುದ್ಧದ ಹೋರಾಟದಲ್ಲಿ ಭಾರತದ ಕಂಪನಿ ಕೋವ್ಯಾಕ್ಸಿನ್ ಅಭಿವೃದ್ಧಿಪಡಿಸಿದೆ. ಭಾರತ್ ಬಯೋಟೆಕ್ ಬಹಳ ಹೆಸರುವಾಸಿ ಹಾಗೂ ನಂಬಿಕೆಗೆ ಅರ್ಹವಾದ ಕಂಪನಿಯಾಗಿದ್ದು, ಎಚ್1ಎನ್1, ರೋಟಾವೈರಸ್, ರೇಬಿಸ್, ಚಿಕೂನ್ ಗುನ್ಯಾ, ಝೀಕಾ ಸೇರಿದಂತೆ 16 ರೋಗಗಳಿಗೆ ಲಸಿಕೆ ಆವಿಷ್ಕರಿಸಿದೆ. ಕಂಪನಿಯ ಸಂಸ್ಥಾಪಕ ಡಾ. ಕೃಷ್ಣ ಎಲ್ಲ ಅವರು ಸಾಧಾರಣ ಕುಟುಂಬದಿಂದ ಬಂದವರಾಗಿದ್ದು, ಯುನಿಸೆಫ್ ಸಹಯೋಗದಲ್ಲಿ 150ಕ್ಕೂ ಹೆಚ್ಚು ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ 400 ಕೋಟಿ ಡೋಸ್ ಲಸಿಕೆಗಳನ್ನು ವಿತರಣೆ ಮಾಡಿದ್ದಾರೆ. ಕೋವ್ಯಾಕ್ಸಿನ್​​ನ 3ನೇ ಹಂತದ ಕ್ಲಿನಿಕಲ್ ಟ್ರಯಲ್​ನಲ್ಲಿ 24,000 ಮಂದಿ ಭಾಗವಹಿಸಿದ್ದು, ಈ ಬಗ್ಗೆ ಶೀಘ್ರವೇ ದತ್ತಾಂಶ ಲಭ್ಯವಾಗಲಿದೆ ಎಂದು ಹೇಳಿದ್ದಾರೆ.

ಕೊರೊನಾ ಲಸಿಕೆಗೆ ಕೇಂದ್ರ ಸರ್ಕಾರ ಅನುಮತಿ ನೀಡಬೇಕು. ನಂತರ ಮಾತ್ರ ಅದನ್ನು ಅಧಿಕೃತ ಎನ್ನಲಾಗುತ್ತದೆ. ಈ ಲಸಿಕೆಯ ಅಡ್ಡ ಪರಿಣಾಮ 15%ಗಿಂತಲೂ ಕಡಿಮೆ ಇದೆ. ಇದು ಬಹಳ ಸುರಕ್ಷಿತ ಲಸಿಕೆ. ಒಬ್ಬ ಆರೋಗ್ಯ ಸಚಿವನಾಗಲ್ಲದೆ, ಸ್ವತಃ ಒಬ್ಬ ವೈದ್ಯಕೀಯ ವೃತ್ತಿಪರನಾಗಿ ನಮ್ಮ ಮನವಿ ಏನೆಂದರೆ, ಯಾರೂ ಕೂಡ ಲಸಿಕೆಯ ಬಗ್ಗೆ ವಿನಾ ಕಾರಣ ಟೀಕಿಸಬಾರದು. ಈ ಮೂಲಕ ವಿಜ್ಞಾನಿಗಳ ಪರಿಶ್ರಮಕ್ಕೆ ಧಕ್ಕೆ ತರಬಾರದು ಎಂದು ಸಚಿವರು ಕೋರಿದ್ದಾರೆ.

ಓದಿ:ಪಕ್ಷದ ಶಿಸ್ತು ಉಲ್ಲಂಘಿಸಿದವರ ಉಚ್ಛಾಟನೆ ಅನಿವಾರ್ಯ: ಸಾ.ರಾ.ಮಹೇಶ್

ಕೊರೊನಾ ಲಸಿಕೆಗೆ ಭಾರತ ಕೈಗೊಂಡಿರುವ ವೈಜ್ಞಾನಿಕ ಸಂಶೋಧನೆಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಬಿಲ್ ಗೇಟ್ಸ್ ಮತ್ತು ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥರ ಹೇಳಿಕೆ ಕುರಿತಂತೆ ಟ್ವೀಟ್ ಮಾಡಿರುವ ಅವರು, ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಕೋವಿಡ್ ಲಸಿಕೆ ಸಂಶೋಧನೆಯಲ್ಲಿ ಭಾರತ ಮುಂಚೂಣಿಯಲ್ಲಿದ್ದು, 'ಸರ್ವೆಜನಾ ಸುಖಿನೋಭವಂತು', ವಸುದೈವ ಕುಟುಂಬಕಮ್' ಆದರ್ಶದಂತೆ ಇಡೀ ಮನುಕುಲಕ್ಕೆ ಲಸಿಕೆ ಒದಗಿಸುವಲ್ಲಿ ಭಾರತ ಮಹತ್ವದ ಪಾತ್ರ ವಹಿಸಲಿದೆ ಎಂದು ತಿಳಿಸಿದ್ದಾರೆ.

ಯುಕೆಯಿಂದ ಬಂದ 11 ಮಂದಿಗೆ ಮಾತ್ರ ಕೊರೊನಾ ಸೋಂಕು ದೃಢ

ಯುಕೆಯಿಂದ ಬಂದಿರುವ 75 ಮಂದಿ ಹಾಗೂ ಸಂಪರ್ಕಿತರ ಪೈಕಿ 37 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಪೈಕಿ 11 ಮಂದಿಗೆ ಮಾತ್ರ ರೂಪಾಂತರಗೊಂಡ ಕೊರೊನಾ ಬಂದಿದ್ದು, 17 ಮಂದಿ ಪ್ರಾಥಮಿಕ ಸಂಪರ್ಕಿತರಾಗಿದ್ದಾರೆ. ರೂಪಾಂತರಗೊಂಡ ಸೋಕಿಗೆ ಒಳಗಾದವರ ಸಂಖ್ಯೆ ಏರಿಕೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಗೃಹ ಇಲಾಖೆಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಯುಕೆಯಿಂದ ಬಂದ ಉಳಿದವರ ಸಂಪರ್ಕ ಪತ್ತೆ ಮಾಡಲು ಸೂಚಿಸಲಾಗಿದೆ. ಅದೇ ರೀತಿ ಬಿಬಿಎಂಪಿ ಆಯುಕ್ತರೊಂದಿಗೂ ಚರ್ಚಿಸಲಾಗಿದೆ. ಆದಷ್ಟು ಶೀಘ್ರದಲ್ಲಿ ಉಳಿದವರ ಸಂಪರ್ಕ ಪತ್ತೆಯಾಗಲಿದೆ ಎಂದರು.

ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು, ಶಿಕ್ಷಕರಿಗೆ ಕೊರೊನಾ ಬಂದಿರುವ ಬಗ್ಗೆ ಅಧಿಕೃತ ಮಾಹಿತಿ ಬಂದಿಲ್ಲ. ನಿಖರವಾಗಿ ಮಾಹಿತಿ ಪಡೆಯಲಾಗುವುದು. ಆದರೆ ಗಾಬರಿಯಾಗುವಂತಹ ವರದಿಯೇನೂ ಬಂದಿಲ್ಲ. ಇದನ್ನು ದೊಡ್ಡದು ಮಾಡಿ ಗಾಬರಿಪಡಿಸುವುದು ಬೇಡ ಎಂದು ಮನವಿ ಮಾಡಿದರು.

For All Latest Updates

TAGGED:

ABOUT THE AUTHOR

...view details