ಬೆಂಗಳೂರು : ನಗರದ ಕಬ್ಬನ್ ಪಾರ್ಕ್ನಲ್ಲಿ ಜುಲೈ 1 ರಿಂದ ಜಾರಿಯಾಗಬೇಕಿದ್ದ ಸಾಕು ನಾಯಿಗಳ ಪ್ರವೇಶದ ನಿರ್ಬಂಧವನ್ನು ತಾತ್ಕಾಲಿಕವಾಗಿ ತಡೆಹಿಡಿಯುವುದಾಗಿ ತೋಟಗಾರಿಕೆ ಇಲಾಖೆ ಹೇಳಿದೆ ಎಂದು ಸಂಸದ ಪಿ ಸಿ ಮೋಹನ್ ಟ್ವೀಟ್ ಮಾಡಿದ್ದಾರೆ. ಸಾಕು ನಾಯಿಗಳ ಪ್ರವೇಶ ನಿಷೇಧಿಸಿರುವುದರ ಕುರಿತು ತೋಟಗಾರಿಕಾ ಸಚಿವ ಮುನಿರತ್ನರೊಂದಿಗೆ ಮಾತುಕತೆ ನಡೆಸಿದ್ದೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಕಬ್ಬನ್ ಪಾರ್ಕ್ಗೆ ಸಾಕು ನಾಯಿಗಳನ್ನು ನಿರ್ಬಂಧಿಸಿರುವ ವಿರುದ್ಧ ನಾಯಿಗಳನ್ನು ಸಾಕಿರುವವರು ಮತ್ತು ಪ್ರಾಣಿ ರಕ್ಷಣಾ ಸಂಘಟನೆಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಈ ರೀತಿ ನಿಷೇಧ ಹೇರಿದರೆ ನಾಯಿಗಳಿಗೆ ಸ್ವತಂತ್ರವಾಗಿ ಓಡಾಡಲು ಸ್ಥಳವೇ ಇಲ್ಲವಾಗುತ್ತದೆ ಎಂದು ಆಗ್ರಹಿಸಿ ಚೇಂಜ್ ಆರ್ಗ್ನಲ್ಲಿ ಅಭಿಯಾನ ನಡೆಸಲಾಗಿತ್ತು. ಜವಾಬ್ದಾರಿ ರಹಿತವಾಗಿ ವರ್ತಿಸುವ ನಾಯಿ ಮಾಲೀಕರಿಗೆ ದಂಡ ವಿಧಿಸಬಹುದು. ಕೆಲವರ ತಪ್ಪಿಗೆ ಎಲ್ಲರಿಗೂ ಶಿಕ್ಷೆ ವಿಧಿಸುವುದು ತಪ್ಪು ಎಂದು ಸಾಕು ನಾಯಿಗಳ ಮಾಲೀಕರು ಅಭಿಪ್ರಾಯಪಟ್ಟಿದ್ದಾರೆ.