ಕರ್ನಾಟಕ

karnataka

By

Published : Mar 21, 2020, 5:25 PM IST

ETV Bharat / state

ಯಾವುದೇ ಎಟಿಎಂನಲ್ಲೂ ಇಲ್ಲ ಸುರಕ್ಷತೆ: ಸ್ಯಾನಿಟೈಸರ್​ ಇಡಲು ಹೆಚ್​ಡಿಕೆ ಆಗ್ರಹ

ಕೊರೋನಾ ವೈರಸ್ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಸರ್ಕಾರ ತಕ್ಷಣವೇ ತೆಗೆದುಕೊಳ್ಳಬೇಕು. ಯಾವುದೇ ಎಟಿಎಂಗಳಲ್ಲಿ ಸುರಕ್ಷತೆ ಇಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್​ ಮೂಲಕ ಆತಂಕ ವ್ಯಕ್ತಪಡಿಸಿದ್ದಾರೆ.

HDK tweet
ಹೆಚ್​ಡಿಕೆ

ಬೆಂಗಳೂರು: ರಾಜ್ಯದ ಯಾವುದೇ ಎಟಿಎಂನಲ್ಲೂ ಸುರಕ್ಷತಾ ಕ್ರಮ ಇಲ್ಲ. ದಿನನಿತ್ಯ ಹಣ ಡ್ರಾ ಮಾಡಲು ನೂರಾರು ಗ್ರಾಹಕರು ಎಟಿಎಂಗಳಿಗೆ ಬರುತ್ತಾರೆ. ಕೊರೊನಾ ವೈರಸ್ ಬಗ್ಗೆ ಮುಂಜಾಗ್ರತಾ ಕ್ರಮ ತಕ್ಷಣವೇ ತೆಗೆದುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್​

ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರತಿ ಎಟಿಎಂ ಕೇಂದ್ರಗಳಲ್ಲಿ ಹ್ಯಾಂಡ್ ಸ್ಯಾನಿಟೈಸರ್ ಕಡ್ಡಾಯವಾಗಿ ಇಡಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ದುರದೃಷ್ಟವಶಾತ್ ಕೊರೊನಾ ಸೋಂಕಿತರು ಹಣ ಡ್ರಾ ಮಾಡಿದರೆ ಅಮಾಯಕರು ಕೊರೊನಾಗೆ ಬಲಿ ಆಗುವ ಸಾಧ್ಯತೆಗಳಿವೆ. ಎಲ್ಲಾ ಬ್ಯಾಂಕ್​ಗಳು ತುರ್ತಾಗಿ ಎಟಿಎಂಗಳಲ್ಲಿ ಸಮರೋಪಾದಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸರ್ಕಾರ ಈ ಬಗ್ಗೆ ಸ್ಪಷ್ಟ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ABOUT THE AUTHOR

...view details