ಕರ್ನಾಟಕ

karnataka

By

Published : Oct 6, 2020, 3:51 PM IST

ETV Bharat / state

ಜೆಡಿಎಸ್ ನಿಂದ ಸ್ಪರ್ಧೆ ಮಾಡುವ ಚಿಂತನೆ ಇಲ್ಲ: ಮುನಿರತ್ನ ಸ್ಪಷ್ಟನೆ

ಬಿಜೆಪಿ ಟಿಕೆಟ್ ಸಿಗದೇ ಇದ್ದಲ್ಲಿ ಜೆಡಿಎಸ್ ನಿಂದ ಸ್ಪರ್ಧೆ ಮಾಡಲು ಮುನಿರತ್ನ ಪ್ಲಾನ್ ಬಿ ಮಾಡಿಕೊಂಡಿದ್ದಾರೆ ಎನ್ನುವ ವರದಿಗಳು ಸತ್ಯಕ್ಕೆ ದೂರವಾಗಿವೆ. ಅಂತಹ ಯಾವುದೇ ಆಲೋಚನೆ ಇಲ್ಲ, ಎಂದು ಮುನಿರತ್ನ ಸ್ಪಷ್ಟಪಡಿಸಿದ್ದಾರೆ.

Munirathna
ಮುನಿರತ್ನ

ಬೆಂಗಳೂರು: ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ನಿಂದ ಸ್ಪರ್ಧೆ ಮಾಡುವ ಯಾವುದೇ ಚಿಂತನೆ ಇಲ್ಲ ಎಂದು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಮುನಿರತ್ನ ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಬಿಜೆಪಿ ಟಿಕೆಟ್ ಸಿಗದೇ ಇದ್ದಲ್ಲಿ ಜೆಡಿಎಸ್ ನಿಂದ ಸ್ಪರ್ಧೆ ಮಾಡಲು ಮುನಿರತ್ನ ಪ್ಲಾನ್ ಬಿ ಮಾಡಿಕೊಂಡಿದ್ದಾರೆ ಎನ್ನುವ ವರದಿಗಳು ಸತ್ಯಕ್ಕೆ ದೂರವಾಗಿವೆ. ಅಂತಹ ಯಾವುದೇ ಆಲೋಚನೆ ಇಲ್ಲ, ಇಬ್ಬರ ಹೆಸರನ್ನು ಹೈಕಮಾಂಡ್ ಗೆ ಕಳಿಸಿಕೊಡಲಾಗಿದೆ ಆದರೆ ಬಿಜೆಪಿಯಿಂದ ಟಿಕೆಟ್ ಸಿಗುವ ವಿಶ್ವಾಸವಿದೆ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊಟ್ಟ ಮಾತಿನಂತೆ ನಡೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.

ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಘೋಷಣೆಯಾಗಿದ್ದು, ಕಳೆದ ಬಾರಿಯ ಪರಾಜಿತ ಅಭ್ಯರ್ಥಿ ತುಳಸಿ ಮುನಿರಾಜುಗೌಡ ಹಾಗು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿರುವ ಮುನಿರತ್ನ ಇಬ್ಬರ ಹೆಸರನ್ನೂ ಬಿಜೆಪಿ ಕೋರ್ ಕಮಿಟಿ ಸಭೆ ಹೈಕಮಾಂಡ್​ಗೆ ಕಳಿಸಿಕೊಟ್ಟಿದೆ. ಸಂಘಟನೆ ಮೂಲಕ ತುಳಸಿ ಮುನಿರಾಜುಗೌಡ, ಮುಖ್ಯಮಂತ್ರಿ ಯಡಿಯೂರಪ್ಪ ಮೂಲಕ ಮುನಿರತ್ನ ಟಿಕೆಟ್ ಪಡೆಯುವ ಯತ್ನ ಮುಂದುವರೆಸಿದ್ದಾರೆ.

ABOUT THE AUTHOR

...view details