ಬೆಂಗಳೂರು: ಜಕ್ಕೂರು ಏರೋಡ್ರಮ್ನ 5 ಕಿ. ಮೀ. ವ್ಯಾಪ್ತಿಯಲ್ಲಿ ನಿಯಮ ಮೀರಿ 45 ಮೀಟರ್ಗಿಂತಲೂ ಎತ್ತರ ಕಟ್ಟಿರುವ ಕಟ್ಟಡಗಳನ್ನು ತಕ್ಷಣವೇ ತೆರವುಗೊಳಿಸಲು ಬಿಬಿಎಂಪಿ ಅಧಿಕಾರಿಗಳಿಗೆ, ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಾ. ನಾರಾಯಣ ಗೌಡ ಆದೇಶಿಸಿದರು.
ವಿಕಾಸ ಸೌಧದಲ್ಲಿ ಇಂದು ನಡೆದ ಸಭೆಯಲ್ಲಿ ಮಾತನಾಡಿ, ಜಕ್ಕೂರು ಏರೋಡ್ರಮ್ ನ 5 ಕಿ. ಮಿ. ವ್ಯಾಪ್ತಿಯಲ್ಲಿ 45 ಮೀಟರ್ ಗಿಂತ ಎತ್ತರದ ಕಟ್ಟಡ ಕಟ್ಟುವಂತಿಲ್ಲ. ಆದಾಗ್ಯೂ ಡಿಜಿಸಿಎ ನಿಯಮ ಮೀರಿ, ಪರವಾನಿಗೆ ಇಲ್ಲದೆ ಕಟ್ಟಡಗಳನ್ನು ಕಟ್ಟಿದ್ದಾರೆ. ಸಚಿವರ ಸೂಚನೆ ಮೇರೆಗೆ ಸರ್ವೆ ನಡೆಸಿದಾಗ ಈ ವಿಚಾರ ಬೆಳಕಿಗೆ ಬಂದಿದೆ. ಪ್ರಾಥಮಿಕ ಸಮೀಕ್ಷೆಯಲ್ಲಿ 15 ಕಟ್ಟಡಗಳು ನಿಯಮ ಉಲ್ಲಂಘಿಸಿ 45 ಮೀಟರ್ಗಿಂತ ಹೆಚ್ಚು ಎತ್ತರದ ಕಟ್ಟಡಗಳನ್ನು ನಿರ್ಮಿಸಿರುವುದು ಪತ್ತೆ ಹಚ್ಚಲಾಗಿದೆ. ಆದ್ದರಿಂದ ಅಕ್ರಮ ಕಟ್ಟಡಗಳನ್ನು ತಕ್ಷಣವೇ ತೆರವು ಮಾಡಬೇಕು ಎಂದು ಸೂಚಿಸಿದರು.
ನಿಯಮ ಮೀರಿ 5 ಕಿ. ಮೀ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಿಸಿರುವುದನ್ನು ಪತ್ತೆ ಹಚ್ಚಲು ಡ್ರೋನ್ ಸರ್ವೆ ನಡೆಸಿ 15 ದಿನಗಳಲ್ಲಿ ವರದಿ ನೀಡುವಂತೆ ಬಿಬಿಎಂಪಿ ಅಧಿಕಾರಿಗಳು ಹಾಗೂ ಇಲಾಖೆ ಅಧಿಕಾರಿಗಳಿಗೆ ಜಂಟಿ ಸರ್ವೆ ನಡೆಸುವಂತೆ ಸೂಚಿಸಿದರು. ಕೆಲವರು ಎನ್ಓಸಿ ಪಡೆಯದೆ ಕಟ್ಟಡ ನಿರ್ಮಿಸಿದ್ದು, ಮತ್ತೆ ಕೆಲವರು ಎನ್ ಓ ಸಿ ಪಡೆದರೂ ಅನುಮೋದಿತ ಎತ್ತರದ ಮಿತಿ ಉಲ್ಲಂಘಿಸಿದ್ದಾರೆ. ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ನಡೆಸಿದ ಸರ್ವೆಯಲ್ಲಿ 11 ಕಟ್ಟಡಗಳು ಹಾಗೂ ವೈಮಾನಿಕ ತರಬೇತಿ ಶಾಲೆಯಿಂದ ನಡೆಸಿದ ಸರ್ವೆಯಲ್ಲಿ 4 ಕಟ್ಟಡಗಳು ನಿಯಮ ಉಲ್ಲಂಘಿಸಿದ್ದು ಪತ್ತೆಯಾಗಿದೆ. ಕೆಲವರು ಸರ್ವೆ ನಡೆಸಲು ಅಸಹಕಾರ ತೋರಿದ್ದಾರೆ. ಹೀಗಾಗಿ ಮತ್ತೊಮ್ಮೆ ಸರ್ವೆ ನಡೆಸಲು ಸೂಚನೆ ನೀಡಿದರು.
ಬಾಡಿಗೆ ಬಾಕಿ ನೀಡದ ಕಂಪೆನಿ ಆಸ್ತಿ ಜಪ್ತಿ