ಕರ್ನಾಟಕ

karnataka

By

Published : May 7, 2019, 7:21 PM IST

ETV Bharat / state

ಬೆಂಗಳೂರಿನಲ್ಲಿ ಮತ್ತೆ ಸರಗಳ್ಳರ ಅಟ್ಟಹಾಸ... ಕಳ್ಳರ ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಮುಂಜಾನೆ ‌ಲಾಲ್​ಬಾಗ್ ಬಳಿಯ ಮಾವಳ್ಳಿ ಬಳಿ ವಾಕಿಂಗ್​ಗೆ ತೆರಳಿದ್ದ ವೃದ್ಧೆ ಬಳಿ ಬಂದ ಇಬ್ಬರು ಸರಗಳ್ಳರು ‌110 ಗ್ರಾಂ ತೂಕದ ಅಂದಾಜು 3 ಲಕ್ಷ ಮೌಲ್ಯದ ಚಿನ್ನದ ಸರ ಕಸಿದು ಪರಾರಿಯಾಗಿದ್ದಾರೆ.

ಕಳ್ಳರ ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ಮತ್ತೆ ಸರಗಳ್ಳರ ಅಟ್ಟಹಾಸ ಮುಂದುವರೆದಿದೆ. ಬೆಳ್ಳಂಬೆಳಗ್ಗೆ ವೃದ್ಧೆಯೊಬ್ಬರ ಚಿನ್ನದ ಸರವನ್ನ ಕಸಿದು ಸರಗಳ್ಳರು ಎಸ್ಕೇಪ್ ಆಗಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಕಳ್ಳರ ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಮುಂಜಾನೆ ‌ಲಾಲ್​ಬಾಗ್ ಬಳಿಯ ಮಾವಳ್ಳಿಗೆ ಶಾಂತಮ್ಮ (75) ಎಂಬ ವೃದ್ಧೆ ವಾಕಿಂಗ್ ತೆರಳಿದ್ದಾರೆ. ಈ ವೇಳೆ ಬೈಕ್​ನಲ್ಲಿ ಬಂದಿದ್ದ ಇಬ್ಬರು ಸರಗಳ್ಳರು ‌110 ಗ್ರಾಂ ತೂಕದ ಅಂದಾಜು 3 ಲಕ್ಷ ಮೌಲ್ಯದ ಚಿನ್ನದ ಸರ ಕಸಿದು ಪರಾರಿಯಾಗಿದ್ದಾರೆ.

ಒಬ್ಬ ಮೊದಲು ಹಿಂದೆಯಿಂದ ಬಂದು ನಂತ್ರ ಅಜ್ಜಿಗೆ ಗೊತ್ತಾಗದ ರೀತಿ ಸರ ಎಗರಿಸಿ ಬೈಕ್​ನಲ್ಲಿ ಪರಾರಿಯಾಗಿದ್ದಾರೆ. ಇನ್ನು ಏರಿಯಾದ ಸಿಸಿಟಿವಿಯಲ್ಲಿ ಸರಗಳ್ಳರ ಕೃತ್ಯ ಸೆರೆಯಾಗಿದ್ದು, ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸಿಸಿಟಿವಿ ಕ್ಯಾಮರಾ ದೃಶ್ಯಾವಳಿ ಆಧಾರಿಸಿ ತನಿಖೆ ಮುಂದುವರೆಸಿದ್ದಾರೆ.

For All Latest Updates

TAGGED:

ABOUT THE AUTHOR

...view details