ಬೆಂಗಳೂರು: ಗಗನಕ್ಕೇರಿದ್ದ ಈರುಳ್ಳಿ ಬೆಲೆಯಲ್ಲಿ ಇಂದು ಕೊಂಚ ಇಳಿಕೆಯಾಗಿದೆ. ಉತ್ತಮ ಗುಣಮಟ್ಟದ್ದ ಈರುಳ್ಳಿ ಸಗಟು ದರದಲ್ಲಿ ಪ್ರತಿ ಕೆಜಿಗೆ ಮಂಗಳವಾರ ಕನಿಷ್ಠ 80 ರಿಂದ 100 ರೂ. ಇತ್ತು. ಇಂದು 75 ರೂಪಾಯಿಯಂತೆ ಮಾರಾಟವಾಗಿದೆ. ಚಿಲ್ಲರೆ ದರ ರೂ. 65 ರಿಂದ ಗರಿಷ್ಠ 75ಕ್ಕೆ ತಲುಪಿದೆ.
ಈ ಕುರಿತು ಮಾತನಾಡಿದ ಬೆಂಗಳೂರು ಆಲೂಗಡ್ಡೆ ಮತ್ತು ಈರುಳ್ಳಿ ವರ್ತಕರ ಸಂಘದ ಕಾರ್ಯದರ್ಶಿ ಉದಯ ಶಂಕರ್, ಈರುಳ್ಳಿ ಹೆಚ್ಚಾಗಿ ಉತ್ತರ ಕರ್ನಾಟಕ ಹಾಗೂ ಮಹಾರಾಷ್ಟ್ರದಿಂದ ಸರಬರಾಜಾಗುತ್ತಿದ್ದು, ಅಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಬೆಳೆಗಳಿಗೆ ಹಾನಿಯಾಗಿದೆ ಎಂದು ತಿಳಿಸಿದರು.