ಕರ್ನಾಟಕ

karnataka

ವೈದ್ಯಕೀಯ ಉಪಕರಣ ಖರೀದಿಯಲ್ಲಿ ಅವ್ಯವಹಾರ ಆರೋಪ.. ನಿಲುವಳಿ ಸೂಚನೆ ಮಂಡಿಸಿದ ಸಿದ್ದರಾಮಯ್ಯ

By

Published : Sep 22, 2020, 5:18 PM IST

ನಿಲುವಳಿ ಸೂಚನೆ (ನಿಯಮ 60ರಡಿ) ಚರ್ಚೆಗೆ ಅವಕಾಶ ಕೊಡುವಂತೆ ನಾವು ನೋಟಿಸ್ ನೀಡಿದ್ದೆವು. ಆದರೆ, ಸಭಾಧ್ಯಕ್ಷರು ಯಾವುದೇ ಪೂರ್ವಭಾವಿ ಪ್ರಸ್ತಾಪವಿಲ್ಲದೆ ನಿಯಮ 69ರಡಿ ಚರ್ಚೆಗೆ ಅವಕಾಶ ಮಾಡಿಕೊಟ್ಟಿರುವುದು ವಿಷಯದ ಗಂಭೀರತೆ ಸಭಾಧ್ಯಕ್ಷರಿಗೆ ಮನದಟ್ಟಾಗಿದೆ..

Opposition party leader Siddaramaih
ವೈದ್ಯಕೀಯ ಉಪಕರಣ ಖರೀದಿಯಲ್ಲಿ ಅವ್ಯವಹಾರ ಆರೋಪ: ನಿಲುವಳಿ ಸೂಚನೆ ಮಂಡಿಸಿದ ಸಿದ್ದರಾಮಯ್ಯ

ಬೆಂಗಳೂರು :ಕೊರೊನಾ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ ಹಾಗೂ ವೈದ್ಯಕೀಯ ಉಪಕರಣ ಖರೀದಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಆರೋಪದ ಪ್ರಕರಣ ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿತು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ನಿಲುವಳಿ ಸೂಚನೆಯಡಿ ವಿಷಯ ಪ್ರಸ್ತಾಪಿಸಲು ನೀಡಿದ್ದ ನೋಟಿಸ್‌ನ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ನಿಯಮ 69ಕ್ಕೆ ಬದಲಿಸಿ ಚರ್ಚೆಗೆ ಅವಕಾಶ ಮಾಡಿಕೊಟ್ಟರು.

ವಿಪಕ್ಷ ನಾಯಕ ಸಿದ್ದರಾಮಯ್ಯ

ವಿಷಯದ ಗಂಭೀರತೆಯನ್ನು ಅರಿತು ನಿಲುವಳಿ ಸೂಚನೆಯನ್ನು ಪರಿವರ್ತಿಸಿ ಚರ್ಚೆಗೆ ಅವಕಾಶ ಮಾಡಿಕೊಡಲಾಗಿದೆ. ಎರಡು ಗಂಟೆಯೊಳಗೆ ಚರ್ಚೆ ಮುಗಿಸಬೇಕು. ಸರ್ಕಾರವು ಆನಂತರ ಉತ್ತರ ಕೊಡಲಿದೆ ಎಂದರು.

ಕೊರೊನಾ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ ಮತ್ತು ವೈದ್ಯಕೀಯ ಸಾಮಗ್ರಿ ಖರೀದಿಯಲ್ಲಿ ಅವ್ಯವಹಾರದ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ದಾಖಲಾಗಿದೆ. ನ್ಯಾಯಾಲಯದ ಕಲಾಪಕ್ಕೆ ತೊಂದರೆಯಾಗದಂತೆ ಚರ್ಚೆ ಮಾಡಬೇಕೆಂದು ಸಲಹೆ ಮಾಡಿದರು.

ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ಕಾಂಗ್ರೆಸ್ ಶಾಸಕ ಆರ್ ವಿ ದೇಶಪಾಂಡೆ, ಕೊರೊನಾದಂತಹ ಗಂಭೀರ ವಿಚಾರದ ಬಗ್ಗೆ ಚರ್ಚಿಸಲು 2 ಗಂಟೆ ಸಮಯ ಸಾಕಾಗುವುದಿಲ್ಲ. ವಿರೋಧ ಪಕ್ಷದ ನಾಯಕರೇ ಸುಮಾರು 2 ಗಂಟೆ ಮಾತನಾಡಬಹುದು. ಎಷ್ಟು ಜನ ಮಾತನಾಡಲು ಸಾಧ್ಯ? ಕನಿಷ್ಠ ನಾಲ್ಕೈದು ಜನರಾದ್ರೂ ಮಾತನಾಡಬೇಕು. ಹೆಚ್ಚು ಸಮಯ ನೀಡಿ ಎಂದು ಮನವಿ ಮಾಡಿದರು.

ನಂತರ ಸಿದ್ದರಾಮಯ್ಯ ಅವರು ಚರ್ಚೆ ಆರಂಭಿಸಿ, ನಿಲುವಳಿ ಸೂಚನೆ (ನಿಯಮ 60ರಡಿ) ಚರ್ಚೆಗೆ ಅವಕಾಶ ಕೊಡುವಂತೆ ನಾವು ನೋಟಿಸ್ ನೀಡಿದ್ದೆವು. ಆದರೆ, ಸಭಾಧ್ಯಕ್ಷರು ಯಾವುದೇ ಪೂರ್ವಭಾವಿ ಪ್ರಸ್ತಾಪವಿಲ್ಲದೆ ನಿಯಮ 69ರಡಿ ಚರ್ಚೆಗೆ ಅವಕಾಶ ಮಾಡಿಕೊಟ್ಟಿರುವುದು ವಿಷಯದ ಗಂಭೀರತೆ ಸಭಾಧ್ಯಕ್ಷರಿಗೆ ಮನದಟ್ಟಾಗಿದೆ ಎಂದು ನಾನು ಭಾವಿಸುತ್ತೇನೆ ಎಂದರು. ಕೊರೊನಾ ಸೋಂಕು ಹರಡುತ್ತಿರುವ ವಿಚಾರ ಗಂಭೀರವಾಗಿದೆ. ಅದರ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.

ABOUT THE AUTHOR

...view details