ಕರ್ನಾಟಕ

karnataka

ನಿರಾಣಿ ಶುಗರ್ಸ್​​ ತೆಕ್ಕೆಗೆ ಪಿಎಸ್ಎಸ್‌ಕೆ: ಸಿಎಂ ಬಿಎಸ್​ವೈಗೆ ಧನ್ಯವಾದ ತಿಳಿಸಿದ ಮುರುಗೇಶ್ ನಿರಾಣಿ

By

Published : Jun 25, 2020, 10:32 PM IST

ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಗೆ ಭೇಟಿ ನೀಡಿದ ಮುರುಗೇಶ್ ನಿರಾಣಿ, ಸಂಪುಟ ಸಭೆ ತೆಗೆದುಕೊಂಡ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿದರು.

Pandavapura Sugar Factory leased to Nirani Sugars
ಸಿಎಂ ಬಿಎಸ್​ವೈಗೆ ಧನ್ಯವಾದ ತಿಳಿಸಿದ ಮುರುಗೇಶ್ ನಿರಾಣಿ

ಬೆಂಗಳೂರು: ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ನಿರಾಣಿ ಶುಗರ್ಸ್​​ಗೆ ಗುತ್ತಿಗೆ ನೀಡಲು ರಾಜ್ಯ ಸಚಿವ ಸಂಪುಟ ‌ಸಭೆ ಒಪ್ಪಿಗೆ ನೀಡಿದ ಹಿನ್ನೆಲೆ ನಿರಾಣಿ ಶುಗರ್ಸ್​​ ಲಿಮಿಟೆಡ್ ಅಧ್ಯಕ್ಷ ಮುರುಗೇಶ್ ನಿರಾಣಿ, ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೃತಜ್ಞತೆ ಸಲ್ಲಿಸಿದರು.

ಸಂಜೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಗೆ ಭೇಟಿ ನೀಡಿದ ಮುರುಗೇಶ್ ನಿರಾಣಿ, ಸಂಪುಟ ಸಭೆ ತೆಗೆದುಕೊಂಡ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿದರು. ಪಿಎಸ್‌ಎಸ್‌ಕೆ ಬಗ್ಗೆ ಕೆಲಕಾಲ ಮಾತುಕತೆ ನಡೆಸಿದರು.

ಪಾಂಡವಪುರ ಸಕ್ಕರೆ ಕಾರ್ಖಾನೆ ಕಬ್ಬು ಬೆಳೆಗಾರರ ಬದುಕಿನ ಆಶಾಕಿರಣವಾಗಿದೆ. ಆದಷ್ಟು ಬೇಗ ಕಾರ್ಖಾನೆಯಿಂದ ಕಬ್ಬು ಅರೆಯಲು ಶುರು ಮಾಡಲಾಗುತ್ತದೆ. ಕಾರ್ಖಾನೆಯನ್ನು ಮಾದರಿ ಸಕ್ಕರೆ ಕಾರ್ಖಾನೆಗಳ ಸಾಲಿನಲ್ಲಿ ತಂದು ನಿಲ್ಲಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ನಿರಾಣಿ ಭರವಸೆ ನೀಡಿದರು.

For All Latest Updates

TAGGED:

ABOUT THE AUTHOR

...view details