ದೇವನಹಳ್ಳಿ(ಬೆಂಗಳೂರು): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರನ್ನು ತಪಾಸಣೆ ಮಾಡುವ ಸಮಯದಲ್ಲಿ ಓರ್ವ ಸಿಐಎಸ್ಎಫ್ ಮಹಿಳಾ ಇನ್ಸ್ಪೆಕ್ಟರ್ಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದಲ್ಲದೆ ಹಲ್ಲೆ ನಡೆಸಿದ್ದಾರೆ. ಕರ್ತವ್ಯ ನಿರತ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಪ್ರಯಾಣಿಕನ ವಿರುದ್ಧ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಡಿದ ನಶೆಯಲ್ಲಿದ್ದ ಪ್ರಯಾಣಿಕ ಮಹಿಳಾ ಅಧಿಕಾರಿ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಕೆಐಎಎಲ್ನಲ್ಲಿ ಡಿಸೆಂಬರ್ 25ರ ಸಂಜೆ 5:10 ಸಮಯದಲ್ಲಿ ಘಟನೆ ನಡೆದಿದೆ. ಜಾಕಿ ಅಮ್ಮನೂರ್ ಖಾಸಿಮ್ ಎಂಬ ವ್ಯಕ್ತಿ ಬೆಂಗಳೂರಿನಿಂದ ಕೊಚ್ಚಿನ್ಗೆ ಪ್ರಯಾಣ ಬೆಳಸಿದ್ದರು. ಸೆಕ್ಯೂರಿಟಿ ಚೆಕ್ನಲ್ಲಿ ಸಿಐಎಸ್ಎಫ್ ಮಹಿಳಾ ಇನ್ಸ್ಪೆಕ್ಟರ್ ಧನೇಶ್ವರಿ ಕುಟ್ಟಾಮ್ ಕರ್ತವ್ಯದಲ್ಲಿದ್ದರು.