ಕರ್ನಾಟಕ

karnataka

ETV Bharat / state

ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ ರಿಜ್ವಾನ್, ಪಿಸಿ ಮೋಹನ್ - counting centre

ಮತ ಎಣಿಕೆ ಕೇಂದ್ರಕ್ಕೆ ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್ ಹಾಗೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ರಿಜ್ವಾನ್ ಅರ್ಷದ್ ಆಗಮಿಸಿ, ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ ರಿಜ್ವಾನ್ ಹಾಗೂ ಪಿಸಿ ಮೋಹನ್

By

Published : May 23, 2019, 10:42 AM IST

ಬೆಂಗಳೂರು: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕೇಂದ್ರಕ್ಕೆ ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್ ಹಾಗೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ರಿಜ್ವಾನ್ ಅರ್ಷದ್ ಭೇಟಿ ನೀಡಿದರು.

ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ ರಿಜ್ವಾನ್ ಹಾಗೂ ಪಿಸಿ ಮೋಹನ್

ಮತಗಳ ಎಣಿಕೆ ಆರಂಭದ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್ ಹಾಗೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ರಿಜ್ವಾನ್ ಅರ್ಷದ್ ಆಗಮಿಸಿದ್ದು, ತಮ್ಮ ಬೆಂಬಲಿಗರೊಂದಿಗೆ ಮತ ಎಣಿಕೆ ಕೇಂದ್ರದ ಒಳಗೆ ತೆರಳಿದ್ದಾರೆ. ಕ್ಷೇತ್ರದಲ್ಲಿ ಸೋಲು, ಗೆಲುವು ಸಾಕಷ್ಟು ಕುತೂಹಲ ಕೆರಳಿಸಿದ್ದು, ಈ ಇಬ್ಬರ ಆಗಮನ ಇನ್ನಷ್ಟು ಕೌತುಕ ಮೂಡಿಸಿದೆ.

ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಮಾತನಾಡಿ, ಪರ್ಸೆಂಟೇಜ್​ ಮೇಲೆ ಎಕ್ಸಿಟ್ ಪೋಲ್ ಮಾಡಿದ್ದಾರೆ ಹೊರತು ಕ್ಷೇತ್ರವಾರು ಸಮೀಕ್ಷೆ ಮಾಡಿಲ್ಲ. ಇನ್ನೂ 50ರಿಂದ 60 ಸಾವಿರ ಅಂತರದಲ್ಲಿ ಗೆಲ್ಲೋ ವಿಶ್ವಾಸ ಇದೆ ಎಂದರು.

ಈ ಸಂದರ್ಭ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್, ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಹಾಗೂ ಹಿರಿಯ ಸರ್ಕಾರಿ ಹಾಗೂ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದಾರೆ.

For All Latest Updates

ABOUT THE AUTHOR

...view details