ಕರ್ನಾಟಕ

karnataka

ಜನವರಿ 19 ರವರೆಗೂ ಪೀಣ್ಯ ಫ್ಲೈ ಓವರ್ ಬಂದ್: ಪರ್ಯಾಯ ಮಾರ್ಗಗಳೇನು?

By ETV Bharat Karnataka Team

Published : Jan 17, 2024, 3:48 PM IST

ಜನವರಿ 19ರ ವರೆಗೂ ಪೀಣ್ಯ ಮೇಲ್ಸೇತುವೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಇರಲಿದೆ.

ಬೆಂಗಳೂರು
ಬೆಂಗಳೂರು

ಬೆಂಗಳೂರು : ಬೆಂಗಳೂರಿನಿಂದ ತುಮಕೂರು, ‌ಹಾಸನ ಕಡೆಗೆ ಸಂಚರಿಸುವ ವಾಹನ ಸವಾರರಿಗೆ ಮುಂದಿನ ಮೂರು ದಿನಗಳ ಕಾಲ ಪೀಣ್ಯ ಮೇಲ್ಸೇತುವೆ ಬಂದ್ ಇರಲಿದೆ. ಮಂಗಳವಾರ ರಾತ್ರಿ 11 ಗಂಟೆಯಿಂದ ಪೀಣ್ಯ ಮೇಲ್ಸೇತುವೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಲೋಡ್ ಟೆಸ್ಟಿಂಗ್ ಕಾರ್ಯ ನಡೆಸಲಾಗುತ್ತಿದೆ. ಮಂಗಳವಾರ ರಾತ್ರಿ 11 ಗಂಟೆಯಿಂದ ಶುಕ್ರವಾರ ಬೆಳಗ್ಗೆ 11 ಗಂಟೆಯ ತನಕ ಫ್ಲೈ ಓವರ್ ಬಂದ್ ಆಗಿರಲಿದೆ. ರಾಷ್ಟ್ರೀಯ ಹೆದ್ದಾರಿ-4ರ ಪೀಣ್ಯ ಎಲಿವೇಟೆಡ್ ಹೈವೇಗೆ ಅಳವಡಿಸಿದ್ದ ವಯಾಡಕ್ಟ್ ದುರಸ್ತಿ ಮಾಡಲಾಗಿದೆ. ಸದ್ಯ ಅದರ ಸಮಗ್ರತೆ ಪರಿಶೀಲನೆ & ಲೋಡ್ ಟೆಸ್ಟಿಂಗ್ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಪರ್ಯಾಯ ಮಾರ್ಗಗಳು :ನೆಲಮಂಗಲ ಕಡೆಯಿಂದ ಬೆಂಗಳೂರು ನಗರಕ್ಕೆ ಫ್ಲೈ ಓವರ್ ರಸ್ತೆಯ ಮೂಲಕ ಸಾಗುವ ವಾಹನಗಳು ಕೆನ್ನಮೆಟಲ್ ವಿಡಿಯಾ ಹತ್ತಿರ, ಫ್ಲೈಓವರ್ ಪಕ್ಕದ ಎನ್ ಹೆಚ್-4, ಸರ್ವಿಸ್ ರಸ್ತೆಯ ಮೂಲಕ 8ನೇ ಮೈಲಿ- ದಾಸರಹಳ್ಳಿ, ಜಾಲಹಳ್ಳಿ ಕ್ರಾಸ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್-ಎಸ್‌ಆರ್‌ಎಸ್ ಜಂಕ್ಷನ್ ಮೂಲಕ ಗೊರಗುಂಟೆಪಾಳ್ಯ ತಲುಪಬಹುದು.

ಸಿಎಂಟಿಐ ಜಂಕ್ಷನ್‌ನಿಂದ ನೆಲಮಂಗಲ ಕಡೆಗೆ ಫ್ಲೈ ಓವರ್ ರಸ್ತೆಯಲ್ಲಿ ಸಾಗುವ ವಾಹನಗಳು ಪಾರ್ಲೆ-ಜಿ ಟೋಲ್ ತಲುಪಲು ಫ್ಲೈ ಓವರ್ ಪಕ್ಕದ ಎನ್​ಹೆಚ್-4, ಸರ್ವಿಸ್ ರಸ್ತೆಯಲ್ಲಿ SRS ಜಂಕ್ಷನ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್- ಜಾಲಹಳ್ಳಿ ಕ್ರಾಸ್, ದಾಸರಹಳ್ಳಿ- 8ನೇ ಮೈಲಿ ಮುಖಾಂತರ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ಭಾರಿ ಗಾತ್ರದ ವಾಹನ ನಿಷೇಧ:ಪೀಣ್ಯ ಎಲಿವೇಟೆಡ್ ಹೈವೆಯಲ್ಲಿ ಅಳವಡಿಸಲಾಗಿದ್ದ ವಯಾಡಕ್ಟ್​ನಲ್ಲಿ ದೋಷ ಕಂಡು ಬಂದಿದ್ದರಿಂದ ಪೀಣ್ಯ ಮೇಲ್ಸೇತುವೆಯಲ್ಲಿ ಲಘು ಗಾತ್ರದ ವಾಹನ ಹೊರತುಪಡಿಸಿ, ಭಾರಿ ಗಾತ್ರದ ವಾಹನಗಳನ್ನ ನಿಷೇಧಿಸಲಾಗಿತ್ತು. ಕಳೆದ ಒಂದು ವರ್ಷಗಳಿಂದ ಇಲ್ಲಿ ದುರಸ್ತಿ ಕಾರ್ಯ ನಡೆಯುತಿತ್ತು. ಭಾರತೀಯ ವಿಜ್ಞಾನ ಸಂಸ್ಥೆ (ಐಎಎಸ್ಸಿ) ನೀಡಿದ ಸಲಹೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಕಾಮಗಾರಿ ನಡೆಸುತ್ತಿತ್ತು. ಸದ್ಯ ಕಾಮಗಾರಿ ಪೂರ್ಣಗೊಂಡಿದ್ದು, ಮೇಲ್ಸೇತುವೆಯ ಪರೀಕ್ಷಾರ್ಥವಾಗಿ ಮೂರು ದಿನಗಳ ಕಾಲ ಎಲ್ಲ ರೀತಿಯ ವಾಹನಗಳ ಸಂಚಾರ ನಿಷೇಧಿಸಲಾಗಿದ್ದು, ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಸಂಚಾರ ಪೊಲೀಸರು (ಜನವರಿ 9-24) ಕೋರಿದ್ದರು.

2021 ರಿಂದ ನಡೆಯುತ್ತಿದ್ದ ಪೀಣ್ಯ ಮೇಲ್ಸೇತುವೆಯ ದುರಸ್ತಿ ಪೂರ್ಣವಾಗಿದೆ. ಈ ಹಿನ್ನೆಲೆಯಲ್ಲಿ ಲೋಡ್ ಟೆಸ್ಟಿಂಗ್ ಮಾಡಬೇಕಾಗಿರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಮೂರು ದಿನ ಸ್ಟ್ರಕ್ಚರಲ್ ಇಂಟಿಗ್ರಿಟಿ ಟೆಸ್ಟ್ ಮಾಡುತ್ತಿದ್ದಾರೆ. ಇದರಿಂದ ಜ 16 ರಿಂದ 19ರವರೆಗೆ ಪೀಣ್ಯ ಮೇಲ್ಸೇತುವೆ ಸಂಪೂರ್ಣವಾಗಿ ಬಂದ್ ಮಾಡುತ್ತೇವೆ. ಸಾರ್ವಜನಿಕರು ಈ ವೇಳೆ ಕೆಳಗಡೆ ಸರ್ವೀಸ್ ರಸ್ತೆ ಬಳಸಬೇಕು ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ. ಎನ್ ಅನುಚೇತ್ ಮಾಹಿತಿ ನೀಡಿದ್ದರು.

ಇದನ್ನೂ ಓದಿ :ಜ 16 ರಿಂದ ಮೂರು ದಿನಗಳ ಕಾಲ ಪೀಣ್ಯ ಮೇಲ್ಸೇತುವೆ ಬಂದ್: ಹೀಗಿದೆ ಪರ್ಯಾಯ ಮಾರ್ಗಗಳ ವಿವರ

ABOUT THE AUTHOR

...view details