ಬೆಂಗಳೂರು: ರಾಜಧಾನಿಯ ಪ್ರಮುಖ ವ್ಯಾಪಾರ ಕೇಂದ್ರವಾದ ಮಲ್ಲೇಶ್ವರಂನಲ್ಲಿ ಎಂದಿನಂತೆ ಜನರು ರಸ್ತೆಯಲ್ಲಿ ಓಡಾಡುತ್ತಿದ್ದು, ಕೊರೊನಾ ವೈರಸ್ನ್ನು ಲೆಕ್ಕಿಸದೇ ಬೇಕಾಬಿಟ್ಟಿ ತಿರುಗಾಡುತ್ತಿರುವುದು ಕಂಡು ಬಂದಿದೆ.
ರಾಜ್ಯದಲ್ಲಿ ದಿನಗಳೆದಂತೆ ಕೊರೊನಾ ವೈರಸ್ ಹೆಚ್ಚಾಗುತ್ತಿರುವುದರಿಂದ ಪರಿಹಾರದ ಕ್ರಮವಾಗಿ ಸರ್ಕಾರ ಈಗ ಕರ್ಫ್ಯೂ ಮೊರೆ ಹೋಗಿದೆ. ಈ ನಡುವೆ ಜನ ಹೂವು, ಹಣ್ಣು, ತರಕಾರಿಗಳನ್ನು ಕೊಂಡುಕೊಳ್ಳಲು ಅಧಿಕ ಸಂಖ್ಯೆಯಲ್ಲಿ ಮಾರುಕಟ್ಟೆಗೆ ಧಾವಿಸಿದ್ದಾರೆ.