ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸ್ಥಾನಕ್ಕೆ ನೂತನ ಅಧ್ಯಕ್ಷರ ನೇಮಕ ಪ್ರಶ್ನಿಸಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸ್ಥಾನಕ್ಕೆ ಶಾಸಕ ಡಾ.ಕೆ.ಸುಧಾಕರ್ ಅವರು ತೆರವಾದ ನಂತ್ರ ನಿಯಂತ್ರಣ ಮಂಡಳಿಯ ಅಧ್ಯಕ್ಷ ರನ್ನಾಗಿ ಡಾ.ಸುಧೀಂದ್ರರಾವ್ ಅವರನ್ನ ರಾಜ್ಯ ಸರಕಾರ ನೇಮಕ ಮಾಡಿದ್ದು ,ಇದನ್ನ ಪ್ರಶ್ನಿಸಿ ಹೈಕೋರ್ಟ್ಗೆ ವಕೀಲ ಎಸ್.ಉಮಾಪತಿ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಸೆ.21 ರಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸ್ಥಾನಕ್ಕೆ ಶಾಸಕ ಡಾ.ಕೆ.ಸುಧಾಕರ್ ಅವರು ರಾಜೀನಾಮೆ ನೀಡಿದ್ದರು. ಇದರಿಂದಾಗಿ ನಾಲ್ಕು ತಿಂಗಳ ಕಾಲ ಪೂರ್ಣಾವಧಿ ಅಧ್ಯಕ್ಷರಿರಲಿಲ್ಲ.