ಕರ್ನಾಟಕ

karnataka

ETV Bharat / state

ಸಿಎಂ ಬಿಎಸ್​ವೈಗೆ ಕರೆ ಮಾಡಿ ಕೋವಿಡ್ ಪರಿಸ್ಥಿತಿಯ ಮಾಹಿತಿ ಪಡೆದ ಪ್ರಧಾನಿ - ಮೋದಿ ಯಡಿಯೂರಪ್ಪ ಚರ್ಚೆ

ಸಿಎಂ ಯಡಿಯೂರಪ್ಪಗೆ ಕರೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಕೋವಿಡ್ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದಿದ್ದಾರೆ.

PM Modi talked with CM yeddyurappa
ಕೋವಿಡ್ ಪರಿಸ್ಥಿತಿಯ ಮಾಹಿತಿ ಪಡೆದ ಪ್ರಧಾನಿ

By

Published : May 9, 2021, 1:17 PM IST

ಬೆಂಗಳೂರು/ನವದೆಹಲಿ : ರಾಜ್ಯದ ಕೋವಿಡ್​ ಪರಿಸ್ಥಿತಿ ಕುರಿತಂತೆ ಪ್ರಧಾನಿ ನರೇಂದ್ರ ಮೋದಿಯವರು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರಿಂದ ಮಾಹಿತಿ ಪಡೆದರು.

ಸಿಎಂ ಬಿಎಸ್​ವೈ ಜೊತೆ ದೂರವಾಣಿ ಮೂಲಕ ಮಾತನಾಡಿದ ಪ್ರಧಾನಿ, ರಾಜ್ಯದ ಕೊರೊನಾ ಸೋಂಕಿನ ಪ್ರಮಾಣ, ಬೆಡ್​ ವ್ಯವಸ್ಥೆ, ಆಕ್ಸಿಜನ್​ ಲಭ್ಯತೆ, ಲಸಿಕೆ ನೀಡುವುದು ಹಾಗೂ ಸೋಂಕಿನ ನಿಯಂತ್ರಣಕ್ಕೆ ತೆಗೆದುಕೊಂಡ ಕ್ರಮಗಳ ಕುರಿತು ಮಾಹಿತಿ ಪಡೆದರು. ಜೊತೆಗೆ ಪಂಜಾಬ್, ಬಿಹಾರ ಮತ್ತು ಉತ್ತರಾಖಂಡ ರಾಜ್ಯಗಳ ಮುಖ್ಯಮಂತ್ರಿಗಳಿಂದಲೂ ಪ್ರಧಾನಿ ಮಾಹಿತಿ ಪಡೆದುಕೊಂಡರು. ನಿನ್ನೆಯೂ ಕೂಡ 5 ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮಾತನಾಡಿದ್ದರು.

ಓದಿ : ನಾಳೆಯಿಂದ 18-44 ವರ್ಷ ವಯೋಮಾನದವರಿಗೆ ಕೋವಿಡ್ ಲಸಿಕೆ: ಡಾ.ಕೆ.ಸುಧಾಕರ್

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳಲ್ಲಿ ಏರಿಕೆ ಕಂಡುಬರುತ್ತಿದೆ. ಇದುವರೆಗೆ ಇದ್ದ ಜನತಾ ಕರ್ಫ್ಯೂನಿಂದ ಯಾವುದೇ ಪರಿಣಾಮ ಕಂಡುಬಂದಿಲ್ಲ. ಈ ಹಿನ್ನೆಲೆ ನಾಳೆಯಿಂದ ಲಾಕ್​ಡೌನ್​ ಜಾರಿಗೊಳಿಸಲಾಗಿದೆ.

ABOUT THE AUTHOR

...view details