ಕರ್ನಾಟಕ

karnataka

ಬಂದ್‌ ಮುನ್ನೆಚ್ಚರಿಕೆ: ಕರವೇ ಪ್ರವೀಣ್ ಶೆಟ್ಟಿ ಬಂಧನ, ಬಿಡುಗಡೆ

ಕರ್ನಾಟಕ ಬಂದ್​ಗೆ ಕನ್ನಡ ಪರ ಸಂಘಟನೆಗಳು ಕರೆ ಕೊಟ್ಟಿದ್ದವು. ಈ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ‌ನಡೆಯದ ರೀತಿ ಮುಂಜಾಗೃತಾ ಕ್ರಮವಾಗಿ ಪೊಲೀಸರು ಕರವೇ ಬಣದ ಪ್ರವೀಣ್ ಶೆಟ್ಟಿಯವರನ್ನು ಗೃಹ ಬಂಧನದಲ್ಲಿಟ್ಟಿದ್ದರು.

By

Published : Feb 13, 2020, 3:42 PM IST

Published : Feb 13, 2020, 3:42 PM IST

karave President Praveen Shetty
ಪ್ರವೀಣ್ ಶೆಟ್ಟಿ

ಬೆಂಗಳೂರು: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕರವೇ ಬಣದ ಪ್ರವೀಣ್ ಶೆಟ್ಟಿ ಅವರಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಉತ್ತರ ವಿಭಾಗ ಪೊಲೀಸರು ಗೃಹ ಬಂಧನ ವಿಧಿಸಿದ್ದರು.

ತದನಂತರ ಪೊಲೀಸರ ಮುಂದೆ ಪ್ರವೀಣ್ ಶೆಟ್ಟಿ ಹೇಳಿಕೆ ಕೊಟ್ಟಿದ್ದು, ನನಗೂ ಕನ್ನಡ ಪರ ಸಂಘಟನೆಯ ಹೋರಾಟಕ್ಕೂ ಸಂಬಂಧ ಇಲ್ಲ. ನಾನು ಈ ಬಂದ್​ನಲ್ಲಿ ಭಾಗಿಯಾಗಿಲ್ಲ ಎಂದು ಹೇಳಿಕೆ ಕೊಟ್ಟ ಮೇಲೆ ಗೃಹ ಬಂಧನದಿಂದ ಬಿಡುಗಡೆ ಮಾಡಿದ್ದಾರೆ.

ಕರ್ನಾಟಕ ಶ್ರಮಜೀವಿ ಕಾರ್ಮಿಕ ವೇದಿಕೆಯ ರಾಜ್ಯಾಧ್ಯಕ್ಷ ಸಂಪತ್‌ ಕುಮಾರ್, ಸುವರ್ಣ ಕರ್ನಾಟಕ ರಕ್ಷಣಾ ಸೇನೆಯ ರಾಜ್ಯಾಧ್ಯಕ್ಷ ಮಹಾದೇವಪುರದ ರಾಘವೇಂದ್ರ ಗೌಡರನ್ನು ವಶಕ್ಕೆ ಪಡೆದಿದ್ದರು.

ABOUT THE AUTHOR

...view details