ಬೆಂಗಳೂರು:ಕಾಶ್ಮೀರ ಮುಕ್ತಿ ಎಂದು ಟೌನ್ ಹಾಲ್ ಬಳಿ ಭಿತ್ತಿಪತ್ರ ಪ್ರದರ್ಶನ ಮಾಡಿದ ಆರ್ದ್ರಾ, ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ಕಾರಣ ಜಾಮೀನು ಕೋರಿ ಆರ್ದ್ರಾ ಪರ ವಕೀಲರು 6ನೇ ಎಸಿಎಂಎಂ ನ್ಯಾಯಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಇಂದು ನ್ಯಾಯಾಲಯ ಅರ್ಜಿ ವಿಚಾರಣೆ ನಡೆಸಿದಾಗ ಪೊಲೀಸರ ಪರ ವಕೀಲರು ಆರ್ದ್ರಾಗೆ ಜಾಮೀನು ನೀಡಬಾರದು. ನಮಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಬೇಕೆಂದು ಮನವಿ ಮಾಡಿದರು. ಹೀಗಾಗಿ ನ್ಯಾಯಾಲಯ ಸರ್ಕಾರಿ ವಕೀಲರಿಗೆ ಆಕ್ಷೇಪಣೆ ಸಲ್ಲಿಕೆ ಮಾಡಲು ಸಮಾಯವಾಕಾಶ ನೀಡಿ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿದೆ.