ಬೆಂಗಳೂರು: ಇಂದು ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮ ವಹಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರ ಸೂಚನೆ ಮೇರೆಗೆ ಆಯಾ ವಿಭಾಗದ ಡಿಸಿಪಿಗಳು ಅವರ ವ್ಯಾಪ್ತಿಗೆ ಬರುವ ಕಾಲೇಜುಗಳ ಬಳಿ ಪರೀಕ್ಷೆ ನಡೆಸಲು ಸಿಬ್ಬಂದಿ ಯಾವ ರೀತಿ ಸಿದ್ಧತೆ ನಡೆಸಿದ್ದಾರೆ ಎಂಬುವುದರ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಆಯಾ ವಿಭಾಗದ ಡಿಸಿಪಿ, ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್, ಹಾಗೂ ಹೊಯ್ಸಳ ಪಡೆಯನ್ನು ಕಾಲೇಜು ಆವರಣದ ಹೊರಗಡೆ ಭದ್ರತೆ ನಿಯೋಜಿಸಲಾಗಿದೆ.
ಒಂದು ವೇಳೆ ಸಾಮಾಜಿಕ ಅಂತರ ಮರೆತು ವಿದ್ಯಾರ್ಥಿಗಳು, ಶಿಕ್ಷಕರು ಪರೀಕ್ಷಾ ಕೇಂದ್ರಕ್ಕೆ ಹೋದರೆ ಅಂತವರಿಗೆ ಪೊಲೀಸರು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಿದ್ದಾರೆ. ಪರೀಕ್ಷಾ ಕೇಂದ್ರ ಪ್ರವೇಶಿಸಲು ಸಮಾಜಿಕ ಅಂತರ ಕಾಯ್ದುಕೊಳ್ಳಲು ಮಾರ್ಕಿಂಗ್ ಮಾಡಿದ್ದು, ಪರೀಕ್ಷಾ ಕೇಂದ್ರ ಪ್ರವೇಶಿಸುತ್ತಲೇ ಪ್ರತಿ ವಿದ್ಯಾರ್ಥಿಗೂ ಕಡ್ಡಾಯ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತದೆ.