ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನ ಸುತ್ತಮುತ್ತ ಗಣೇಶೋತ್ಸವಕ್ಕೆ ನಿರ್ಬಂಧದ ಹಿನ್ನೆಲೆ ಖಾಕಿ ಪಡೆಯನ್ನು ನಿಯೋಜನೆ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಲಾಗಿದೆ.
ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಸೂಚನೆ ಮೇರೆಗೆ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಪಶ್ಚಿಮ ವಲಯ ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸಂದೀಪ್ ಪಾಟೀಲ್ ನೇತೃತ್ವದಲ್ಲಿ ಇಬ್ಬರು ಡಿಸಿಪಿ, 21 ಜನ ಎಸಿಪಿ, 50 ಮಂದಿ ಇನ್ಸ್ಪೆಕ್ಟರ್, 130 ಪಿಎಸ್ಐ, 126 ಎಎಸ್ಐ, 900 ಹೆಚ್ಸಿಪಿಸಿ, 120 ಮಂದಿ ಆರ್ಎಎಫ್ ಸಿಬ್ಬಂದಿ ಹಾಗೂ 10ಕ್ಕೂ ಹೆಚ್ಚು ಕೆಎಸ್ಆರ್ಪಿ ತುಕಡಿ ಸೇರಿ ಭದ್ರತೆಗಾಗಿ 1240 ಮಂದಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.