ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷದ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರಾಗಿ ಆಯ್ಕೆಯಾಗಿ ಕೆಲ ತಿಂಗಳು ಅಧಿಕಾರ ಮುಂದುವರಿಸಿದ್ದ ಕೆ.ಅಬ್ದುಲ್ ಜಬ್ಬಾರ್ ಇದೀಗ ವಿಧಾನ ಪರಿಷತ್ ಸದಸ್ಯರಾಗಿ ನಿಯೋಜಿತರಾಗಿದ್ದಾರೆ. ಪಕ್ಷದಲ್ಲಿ ಒಬ್ಬರು ಎರಡು ಹುದ್ದೆಯಲ್ಲಿ ಇರುವಂತಿಲ್ಲ ಎನ್ನುವ ನಿಯಮ ಇರುವ ಹಿನ್ನೆಲೆ ಅಲ್ಪಸಂಖ್ಯಾತ ಘಟಕಕ್ಕೆ ಮತ್ತೊಬ್ಬರ ನೇಮಕ ಆಗಲಿದೆ ಎನ್ನುವ ಮಾತು ಕೇಳಿ ಬರುತ್ತಿದೆ.
ವಿಧಾನ ಪರಿಷತ್ ಸದಸ್ಯರಾದ ಮಾತ್ರಕ್ಕೆ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕೆಂದೇನೂ ಇಲ್ಲ. ಎರಡು ಹುದ್ದೆಯನ್ನು ಹೊಂದಿದ್ದರೆ ಅದು ದೊಡ್ಡ ಜವಾಬ್ದಾರಿ. ಆದರೆ, ಅಧ್ಯಕ್ಷರಾಗಿದ್ದವರು ವಿಧಾನಸಭೆ ಇಲ್ಲವೇ ವಿಧಾನ ಪರಿಷತ್ ಸದಸ್ಯರಾದರೆ ಅಧ್ಯಕ್ಷ ಸ್ಥಾನ ತ್ಯಜಿಸಬೇಕೆಂದೇನು ಇಲ್ಲ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷರಾದ ರಾಮಲಿಂಗರೆಡ್ಡಿ, ಸಲೀಂ ಅಹಮದ್, ಈಶ್ವರ್ ಖಂಡ್ರೆ ಮಾತ್ರವಲ್ಲದೇ ಹಲವು ನಾಯಕರು ಎರಡು ಹುದ್ದೆ ಹೊಂದಿದ್ದು, ಬದಲಾವಣೆ ಅಗತ್ಯವಿಲ್ಲ ಎಂದು ಕೆಲ ನಾಯಕರು ಹೇಳುತ್ತಿದ್ದಾರೆ.
ಆದರೆ, ಮತ್ತೆ ಕೆಲವರು ಅಲ್ಪಸಂಖ್ಯಾತ ಘಟಕದ ಅಡಿ ಮುಸ್ಲೀಂಮರು ಮಾತ್ರ ಇಲ್ಲ. ಕ್ರಿಶ್ಚಿಯನ್, ಸಿಕ್, ಜೈನರು ಸೇರಿದಂತೆ ಎಲ್ಲ ಅಲ್ಪಸಂಖ್ಯಾತ ಸಮುದಾಯದವರೂ ಇದ್ದಾರೆ. ಇದರಿಂದ ಬೇರೆ ಸಮುದಾಯಕ್ಕೆ ಯಾಕೆ ಅವಕಾಶ ನೀಡಬಾರದು ಎಂಬ ಮಾತನ್ನು ಸಹ ಕೆಲವರು ಆಡುತ್ತಿದ್ದಾರೆ. ಅಬ್ದುಲ್ ಜಬ್ಬಾರ್ ಇತ್ತೀಚೆಗೆ ವಿಧಾನ ಪರಿಷತ್ಗೆ ನಾಮನಿರ್ದೇಶನಗೊಂಡಿದ್ದಾರೆ.
ಈಗಾಗಲೇ ಪರಿಷತ್ನಲ್ಲಿ ಕಾಂಗ್ರೆಸ್ ಪಕ್ಷದಿಂದ ಮುಸಲ್ಮಾನ್ ಸಮುದಾಯವನ್ನು ಪ್ರತಿನಿಧಿಸುವ ಮೂವರು ಸದಸ್ಯರಿದ್ದಾರೆ. ಇನ್ನೊಬ್ಬರ ಅಗತ್ಯ ಇರಲಿಲ್ಲ. ಅಲ್ಲದೇ ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ಜಬ್ಬಾರ್ ಎಮ್ಮೆಲ್ಸಿ ಆಗಿದ್ದರು. ಹೊಸಬರಿಗೆ ಅವಕಾಶ ನೀಡಬೇಕೆಂಬ ಒತ್ತಾಯ ಇತ್ತು.
ಒಬ್ಬರಿಗೆ ಒಂದು ಜವಾಬ್ದಾರಿ ನೀಡಿದ್ದರೆ ಸಾಕಿತ್ತು?:ಒಂದು ಜವಾಬ್ದಾರಿಯುತ ಹೊಣೆಗಾರಿಕೆ ನಿಭಾಯಿಸುತ್ತಿರುವ ಅವರ ಬದಲು ಬೇರೊಬ್ಬರನ್ನು ವಿಧಾನ ಪರಿಷತ್ಗೆ ಆಯ್ಕೆ ಮಾಡಬೇಕಿತ್ತು ಎಂಬ ಮಾತು ಕೇಳಿಬಂದಿತ್ತು. ಆದರೆ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಅಬ್ದುಲ್ ಜಬ್ಬಾರ್ ಸುಲಭವಾಗಿ ಎಮ್ಮೆಲ್ಸಿ ಆಗಿಬಿಟ್ಟರು.
ಅಬ್ದುಲ್ ಜಬ್ಬಾರ್ ಪ್ರಸ್ತುತ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ದಾವಣಗೆರೆ ಜಿಲ್ಲಾಧ್ಯಕ್ಷರಾಗಿದ್ದರು, ಸಿದ್ದರಾಮಯ್ಯ ಅವಧಿಯಲ್ಲಿ ಎಂಎಲ್ಸಿಯಾಗಿದ್ದರು, ಅಲ್ಪ ಸಂಖ್ಯಾತ ಜನಪ್ರತಿನಿಧಿಗಳೆಲ್ಲರ ಒಕ್ಕೊರಲ ಶಿಫಾರಸು ಇವರಿಗೆ ಲಭಿಸಿದ ಹಿನ್ನೆಲೆ ಪರಿಷತ್ಗೆ ಆಯ್ಕೆಯಾಗಿದ್ದಾರೆ. ಅಬ್ದುಲ್ ಜಬ್ಬಾರ್ಗೆ ಟಿಕೆಟ್ ನೀಡಿದ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಒಂದಿಷ್ಟು ಆಕ್ರೋಶ ವ್ಯಕ್ತವಾಗಿತ್ತು.