ಕರ್ನಾಟಕ

karnataka

ಬೀದಿಬದಿ ವ್ಯಾಪಾರಿಗಳಿಂದ ಪ್ರತಿಭಟನೆ: ಹಬ್ಬದ ಮಾರಾಟಕ್ಕೆ ಅಡ್ಡಿಪಡಿಸಿದ ಪಾಲಿಕೆ ಅಧಿಕಾರಿಗಳ ವಿರುದ್ಧ ಗರಂ

By ETV Bharat Karnataka Team

Published : Jan 13, 2024, 11:00 PM IST

Updated : Jan 14, 2024, 6:49 AM IST

ಹಬ್ಬದ ಮಾರಾಟಕ್ಕೆ ಅಡ್ಡಿಪಡಿಸಿದ ಪಾಲಿಕೆ ಅಧಿಕಾರಿಗಳ ವಿರುದ್ಧ ಬೀದಿಬದಿ ವ್ಯಾಪಾರಿಗಳು ಪ್ರತಿಭಟನೆ ನಡೆಸಿದರು.

ಬೀದಿಬದಿ ವ್ಯಾಪಾರಿಗಳಿಂದ ಪ್ರತಿಭಟನೆ  ಪಾಲಿಕೆ ಅಧಿಕಾರಿಗಳ ವಿರುದ್ಧ ಆಕ್ರೋಶ  Protest by street vendors  corporation officials
ಬೀದಿಬದಿ ವ್ಯಾಪಾರಿಗಳಿಂದ ಪ್ರತಿಭಟನೆ: ಹಬ್ಬದ ಮಾರಾಟಕ್ಕೆ ಅಡ್ಡಿಪಡಿಸಿದ ಪಾಲಿಕೆ ಅಧಿಕಾರಿಗಳ ವಿರುದ್ಧ ಗರಂ

ಬೀದಿಬದಿ ವ್ಯಾಪಾರಿಗಳಿಂದ ಪ್ರತಿಭಟನೆ: ಹಬ್ಬದ ಮಾರಾಟಕ್ಕೆ ಅಡ್ಡಿಪಡಿಸಿದ ಪಾಲಿಕೆ ಅಧಿಕಾರಿಗಳ ವಿರುದ್ಧ ಗರಂ

ಬೆಂಗಳೂರು:ಹಬ್ಬದ ಹಿನ್ನೆಲೆಯಲ್ಲಿ ಕಬ್ಬು, ಎಳ್ಳು, ಬೆಲ್ಲ, ಹೂವು, ಸೊಪ್ಪು, ತರಕಾರಿ ಬಟ್ಟೆ ಮಾರಾಟಕ್ಕೆ ಬಿಬಿಎಂಪಿ ಅಧಿಕಾರಿಗಳು ಅಡ್ಡಿಪಡಿಸುತ್ತಿದ್ದಾರೆ ಎಂದು ಹಬ್ಬದ ಮಾರಾಟ ವಸ್ತುಗಳನ್ನು ಹಿಡಿದು ಬೀದಿ ಬದ ವ್ಯಾಪಾರಿಗಳು ಪ್ರತಿಭಟನೆ ನಡೆಸಿದ ಘಟನೆ ಜಯನಗರ ಶಾಪಿಂಗ್ ಕಾಂಪ್ಲೆಕ್ ಮುಂಭಾಗ ನಡೆಯಿತು.

ರಸ್ತೆಯಲ್ಲೇ ಸೊಪ್ಪು ತರಕಾರಿ ಹಿಡಿದು ವ್ಯಾಪಾರಿಗಳು ಕುಳಿತು ಪ್ರತಿಭಟನೆ ನಡೆಸುವ ವೇಳೆ ತರಕಾರಿ ಬುಟ್ಟಿಗಳನ್ನು ತಲೆಯ ಮೇಲೆ ಹೊತ್ತು ಧಿಕ್ಕಾರ ಕೂಗಿದರು. ನಿನ್ನೆ ಬೀದಿಬದಿ ವ್ಯಾಪಾರಿಗಳನ್ನು ತೆರವು ಮಾಡಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ನೂರಾರು ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ ಸಂಕ್ರಾಂತಿ ಹಬ್ಬಕ್ಕೆ ನಮ್ಮ ಹೊಟ್ಟೆ ಮೇಲೆ ಹೊಡೆಯ ಬೇಡಿ ಎಂದು ಮನವಿ ಮಾಡಿದರು. ಬಂಡವಾಳ ಹೂಡಿ ವಸ್ತುಗಳನ್ನು ತಂದಿದ್ದೇವೆ. ಆದರೆ, ಮಾರಾಟ ಮಾಡಲು ಆಗುತ್ತಿರಲ್ಲ, ಕನಿಷ್ಠ ಪಕ್ಷ ಮೂರು ದಿನಗಳ ಮಟ್ಟಿಗಾದರೂ ಅವಕಾಶ ಕೊಡಿ ಎಂದು ವಿನಂತಿಸಿದರು.

ವಾಹನಗಳ ಪಾರ್ಕಿಂಗ್​ಗೆ ಪಾದಚಾರಿ ಮಾರ್ಗದಲ್ಲಿ ಸ್ಥಳ ನೀಡುವುದಾದರೆ ಜೀವನೋಪಾಯಕ್ಕಾಗಿ ವ್ಯಾಪಾರ ಮಾಡುತ್ತಿರುವ ನಮಗೆ ಯಾಕೆ ನೀಡಬಾರದು ಎಂದು ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದರು. ಬಿಬಿಎಂಪಿ ಮಾರ್ಷಲ್​ಗಳು ಬೀದಿ ಬದಿಯ ವ್ಯಾಪಾರಿಗಳಿಗೆ ಅನಗತ್ಯವಾಗಿ ತೊಂದರೆ ನೀಡುತ್ತಿದ್ದಾರೆ. ಈ ಹಿಂದೆ ನಮ್ಮ ಕಿರುಕುಳದ ಬಗ್ಗೆ ದೂರು ನೀಡಿ 2014 ರ ಕಾಯಿದೆಯ ಅನ್ವಯ ಬೀದಿ ಬದಿ ವ್ಯಾಪಾರಿಗಳಿಗೆ ರಕ್ಷಣೆ ನೀಡುವಂತೆ ಮನವಿಯನ್ನು ಸಲ್ಲಿಸಲಾಗಿತ್ತು. ಆದರೆ, ಇದುವರೆಗೂ ಪಟ್ಟಣ ವ್ಯಾಪಾರ ಸಮಿತಿ ಕರೆದಿಲ್ಲ. ನಮ್ಮ ಮೇಲೆ ನಡೆಯುತ್ತಿರುವ ಕಿರುಕುಳ ನಿಂತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಖಾಸಗಿ ಬಡಾವಣೆಗಳಲ್ಲಿ ಪಾರ್ಕಿಂಗ್​ಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಆದರೆ, ಬೀದಿಬದಿ ವ್ಯಾಪಾರಿಗಳಿಗೆ ಜಾಗ ನೀಡಿಲ್ಲ. ಈ ತಾರತಮ್ಯವನ್ನು ಪರಿಗಣಿಸಿ ಪ್ರತಿಯೊಬ್ಬ ಬೀದಿ ಬದಿ ವ್ಯಾಪಾರಿಗಳಿಗೆ 4X6 ಅಡಿ ಜಾಗವನ್ನು ನಿಗದಿಪಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪಾಲಿಕೆ ಮಾಜಿ ಸದಸ್ಯ ಎನ್. ನಾಗರಾಜು ಪ್ರತಿಭಟನೆಯ ನೇತೃತ್ವ ವಹಿಸಿ ಸ್ಥಳೀಯ ಶಾಸಕ ಸಿ.ಕೆ. ರಾಮಮೂರ್ತಿ ವಿರುದ್ಧ ಕಿಡಿಕಾರಿದರು. ವ್ಯಾಪಾರಿಗಳು ಕಬ್ಬು, ಸೊಪ್ಪು, ಹಣ್ಣು ತರಕಾರಿ ಕೈಯಲ್ಲಿ ಹಿಡಿದು ಪ್ರತಿಭಟನೆ ನಡೆಸಿಬೇಕಾಗಿ ಬಂದಿದೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:ಸಂಕ್ರಾಂತಿ ಸಂಭ್ರಮ: ಸಿಲಿಕಾನ್ ಸಿಟಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ

Last Updated : Jan 14, 2024, 6:49 AM IST

ABOUT THE AUTHOR

...view details