ಬೆಂಗಳೂರು: ಕೋವಿಡ್ 19 ನಿರ್ವಹಣೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವೈಫಲ್ಯ ಹಾಗೂ ಜನವಿರೋಧಿ ನೀತಿ, ಪೆಟ್ರೋಲ್ ಡೀಸೆಲ್ ದರ ಏರಿಕೆ, ಗ್ರಾಮ ಪಂಚಾಯತ್ಗಳಿಗೆ ಆಡಳಿತಾಧಿಕಾರಿ ನೇಮಕ ಮಾಡಿರುವುದನ್ನು ವಿರೋಧಿಸಿ, ಕಾಂಗ್ರೆಸ್ ಜೂನ್ 29ರಂದು ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ನಿರ್ಧರಿಸಿದೆ ಎಂದು ಡಿಕೆಶಿ ತಿಳಿಸಿದರು.
ಪ್ರತಿಭಟನೆಯ ರೂಪುರೇಷೆ ಸ್ವರೂಪ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಇಂದು ಸಂಜೆ ನಡೆದ ಹಿರಿಯ ನಾಯಕರ ಸಭೆಯ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಸೋಮವಾರ ಸೈಕಲ್ ಜಾಥಾ ನಡೆಸಲು ನಿರ್ಧರಿಸಲಾಗಿದೆ ಎಂದರು.