ಬೆಂಗಳೂರು: ಇಂದು ನಾಡಿನೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ. ನಗರದ ಜನತೆ ಹಬ್ಬದ ಭರಾಟೆಯಲ್ಲಿ ಕೊರೊನಾ ಮರೆತು ಭರ್ಜರಿ ಶಾಪಿಂಗ್ನಲ್ಲಿ ತೊಡಗಿದ್ದಾರೆ. ನಗರದ ಕೆ.ಆರ್ ಮಾರುಕಟ್ಟೆಯಲ್ಲಿ ಹಬ್ಬದ ಖರೀದಿಗೆ ಜನಸಾಗರವೇ ಹರಿದು ಬಂದಿದೆ. ಹೂ, ಹಣ್ಣು ತರಕಾರಿ ಸೇರಿ ಹಬ್ಬದ ವಸ್ತು ಖರೀದಿಗಾಗಿ ಜನರು ಮುಗಿಬಿದ್ದ ದೃಶ್ಯ ಕಂಡುಬಂತು.
ಬಿಬಿಎಂಪಿ ಕಮಿಷನರ್ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲದಂತೆ ಜನರು ಕೊರೊನಾ ಮರೆತು ಗುಂಪು ಗುಂಪಾಗಿ ಖರೀದಿಯಲ್ಲಿ ತೊಡಗಿದ್ದಾರೆ. ಕಳೆದೆರಡು ದಿನಗಳಿಂದಲೂ ಮಾಸ್ಕ್ ಇಲ್ಲದೆ, ಅಂತರವನ್ನೂ ಕಾಯ್ದುಕೊಳ್ಳದೆ ಕೋವಿಡ್ ನಿಯಮಗಳ ಗಾಳಿಗೆ ತೂರಲಾಗುತ್ತಿದೆ. ಜನರಿಗೆ ಎಚ್ಚರಿಕೆ ನೀಡಲು ಬಿಬಿಎಂಪಿ ಅಧಿಕಾರಿಗಳು ಹಾಗೂ ಮಾರ್ಷಲ್ಗಳೂ ಸ್ಥಳದಲ್ಲಿ ಇಲ್ಲದಿರುವುದು ಕಂಡುಬಂದಿದೆ.