ಕರ್ನಾಟಕ

karnataka

By

Published : Sep 16, 2021, 3:25 PM IST

Updated : Sep 16, 2021, 5:53 PM IST

ETV Bharat / state

ಆಸ್ಕರ್ ಫರ್ನಾಂಡಿಸ್‌ ಪಾರ್ಥಿವ ಶರೀರಕ್ಕೆ ರಾಹುಲ್ ಗಾಂಧಿ ಅಂತಿಮ ನಮನ; ಕುಟುಂಬಸ್ಥರಿಗೆ ಸಾಂತ್ವನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಗಳೂರಿನ ಪ್ಯಾಟ್ರಿಕ್ ಚರ್ಚ್​ನಲ್ಲಿರುವ ದಿ.ಆಸ್ಕರ್ ಫರ್ನಾಂಡಿಸ್ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದರು. ಬಳಿಕ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

Rahul gandhi come to bangalore
ದಿ.ಆಸ್ಕರ್ ಫರ್ನಾಂಡಿಸ್ ಅವರಿಗೆ​ ಅಂತಿಮ ನಮನ ಸಲ್ಲಿಸಿದ ರಾಹುಲ್ ಗಾಂಧಿ

ಬೆಂಗಳೂರು:ಇಲ್ಲಿನ ಪ್ಯಾಟ್ರಿಕ್ ಚರ್ಚ್​ನಲ್ಲಿ ಹಿರಿಯ ಕಾಂಗ್ರೆಸ್‌ ನಾಯಕಆಸ್ಕರ್ ಫರ್ನಾಂಡಿಸ್ ಅವರ ಪಾರ್ಥಿವ ಶರೀರದ ದರ್ಶನ ಪಡೆದ ರಾಹುಲ್ ಗಾಂಧಿ, ಅಂತಿಮ ನಮನ ಸಲ್ಲಿಸಿದರು.

ಆಸ್ಕರ್ ಫರ್ನಾಂಡಿಸ್‌ ಪಾರ್ಥಿವ ಶರೀರಕ್ಕೆ ರಾಹುಲ್ ಗಾಂಧಿ ಅಂತಿಮ ನಮನ

ಬಳಿಕ ನಗರದ ಜೋಸೆಫ್ ಕಾಲೇಜು ಸಮೀಪದಲ್ಲಿರುವ ರೆಸ್ಟ್ ಹೌಸ್ ರಸ್ತೆಯಲ್ಲಿರುವ ಫರ್ನಾಂಡಿಸ್ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ಆಸ್ಕರ್ ಪತ್ನಿ ಬ್ಲಾಸಂ ಫರ್ನಾಂಡಿಸ್, ಪುತ್ರ ಓಶಾನ್ ಫರ್ನಾಂಡಿಸ್ ಹಾಗು ಪುತ್ರಿ ಓಶೀನ್ ಫರ್ನಾಂಡಿಸ್ ಸೇರಿದಂತೆ ಮತ್ತಿತರರಿದ್ದರು.

ದಿ.ಆಸ್ಕರ್ ಕುಟುಂಸ್ಥರಿಗೆ ಸಾಂತ್ವನ ಹೇಳಿದ ರಾಹುಲ್​

ಇದಕ್ಕೂ ಮುನ್ನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರನ್ನು ರಾಜ್ಯ ಕಾಂಗ್ರೆಸ್‌ ನಾಯಕರು ಬರಮಾಡಿಕೊಂಡರು.

ದಿ.ಆಸ್ಕರ್ ಫರ್ನಾಂಡಿಸ್ ಅಂತಿಮ ವಿಧ-ವಿಧಾನದಲ್ಲಿ ಕೈ ನಾಯಕರು ಭಾಗಿ

ಈ ಸಂದರ್ಭದಲ್ಲಿ ಸಿದ್ದರಾಮಯ್ಯ, ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಇದ್ದರು.

ಅಂತಿಮ ನಮನ ಸಲ್ಲಿಸಲು ಬೆಂಗಳೂರಿಗೆ ರಾಹುಲ್ ಆಗಮನ

ಇದನ್ನೂ ಓದಿ: ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್​ಗೆ ಕೈ ನಾಯಕರಿಂದ ಅಂತಿಮ ನುಡಿ - ನಮನ

Last Updated : Sep 16, 2021, 5:53 PM IST

ABOUT THE AUTHOR

...view details