ಬೆಂಗಳೂರು: ನಗರದ ಚಾಮಾರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ, ನಾಡೋಜ ಡಾ. ಬರಗೂರು ಪ್ರತಿಷ್ಠಾನ ಹಮ್ಮಿಕೊಂಡಿದ್ದ ರಾಜಲಕ್ಷ್ಮಿ ಬರಗೂರು ಪುಸ್ತಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಲೇಖಕಿ ಡಾ. ವಿಜಯಾ ಪ್ರಶಸ್ತಿ ಪ್ರದಾನ ಮಾಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾಹಿತಿ ರಾಜಲಕ್ಷ್ಮಿ ಅವರೊಂದಿಗೆ ನಾನು ಸಂಕಟ ಮತ್ತು ಸಂತೋಷದ ಸಮಯದಲ್ಲಿ ಜೊತೆಗಿದ್ದೆ. ಆದರೆ, ಅವರು ಬೀದಿಗಿಳಿದು ಸಮಾಜದ ಬದಲಾವಣೆಗೆ ಹೋರಾಟ ಮಾಡದಿದ್ದರೂ, ರಾಜಲಕ್ಷ್ಮಿ ಅವರು ಮನೆಯಲ್ಲಿದ್ದು ಹೋರಾಟಕ್ಕೆ ಸ್ಫೂರ್ತಿ ನೀಡುತ್ತಿದ್ದರು. ಎಂತಹ ಸಮಯದಲ್ಲೂ ಕಣ್ಣೀರು ಹಾಕದೆ ಗಟ್ಟಿಯಾದ ಧ್ವನಿಯಿಂದ ಜೀವನ ನಡೆಸಿದ್ದಾರೆ ಎಂದು ಹೇಳಿದರು.