ಬೆಂಗಳೂರು:ಭಾಷೆಯ ಕಾರಣಕ್ಕೆ ಚಂದ್ರು ಕೊಲೆಯಾಗಿದ್ದರೆ ಅಪರಾಧಿಗಳನ್ನು ಪಾಕಿಸ್ತಾನಕ್ಕೆ ಓಡಿಸಬೇಕು ಎಂಬ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ ಕುರಿತು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಸಿ.ಟಿ.ರವಿ ಚಂದ್ರು ಕೊಲೆ ವಿಷಯವನ್ನು ಮುನ್ನೆಲೆಗೆ ತಂದು ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಸಿ.ಟಿ.ರವಿ ರಾಜ್ಯದಲ್ಲಿ ವಿವಾದದ ವಿಷಯ ಇಲ್ಲದಿರುವಾಗಲೂ ಏನಾದರೊಂದು ವಿಷಯವನ್ನು ಕ್ರಿಯೇಟ್ ಮಾಡ್ತಾರೆ. ನಾವು ಎಲ್ಲಾ ಕಡೆ ದೂರು ನೀಡಿದ್ದೇವೆ. ಆದರೆ, ಇಲ್ಲಿಯವರೆಗೆ ಅವರ ವಿರುದ್ಧ ಎಫ್ಐಆರ್ ದಾಖಲಾಗಿಲ್ಲ ಎಂದರು.