ಕರ್ನಾಟಕ

karnataka

By

Published : Nov 25, 2020, 2:43 PM IST

Updated : Nov 25, 2020, 3:02 PM IST

ETV Bharat / state

ಯೋಗೇಶ್ವರ್​​ಗೆ ಸಚಿವ ಸ್ಥಾನ ನೀಡುವಂತೆ ಕಡೆ ಕ್ಷಣದವರೆಗೂ ಹೋರಾಟ.. ಸೈನಿಕನ ಪರ ಅಖಾಡಕ್ಕಿಳಿದ ಸಾಹುಕಾರ

ಸಿ.ಪಿ.ಯೋಗೇಶ್ವರ್​ಗೆ ಸಚಿವ ಸ್ಥಾನ ನೀಡುವಂತೆ ಕೊನೆ ಕ್ಷಣದವರೆಗೂ ಹೋರಾಟ ಮಾಡುತ್ತೇನೆ. ಯೋಗೇಶ್ವರ್​ಗೆ ಸಚಿವ ಸ್ಥಾನ ನೀಡುವಂತೆ ಹೋರಾಡುವುದು ನನ್ನ ಧರ್ಮ ಮತ್ತು ಕರ್ತವ್ಯ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

yogeshwar
ಸೈನಿಕನ ಪರ ಅಖಾಡಕ್ಕಿಳಿದ ಸಾಹುಕಾರ

ಬೆಂಗಳೂರು : ಸಿ.ಪಿ.ಯೋಗೇಶ್ವರ್​​ಗೆ ಸಚಿವ ಸ್ಥಾನ ನೀಡುವುದು, ಬಿಡುವುದು ಹೈಕಮಾಂಡ್ ಮತ್ತು ಸಿಎಂ ಯಡಿಯೂರಪ್ಪಗೆ ಬಿಟ್ಟ ವಿಚಾರ. ಆದರೆ, ಯೋಗೇಶ್ವರ್​​ಗೆ ಸಚಿವ ಸ್ಥಾನ ನೀಡುವಂತೆ ಕಡೆ ಕ್ಷಣದವರೆಗೂ ಹೋರಾಟ ನಡೆಸುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, ಯೋಗೇಶ್ವರ್ ನನ್ನ ಗೆಳೆಯ. ಅವರನ್ನು ಸಚಿವರನ್ನಾಗಿ ಮಾಡಬಾರದು, ಸೋತವರನ್ನು ಸಚಿವರನ್ನಾಗಿ ಮಾಡಬೇಡಿ ಎಂದು ಕೆಲ ಶಾಸಕರು ನನ್ನನ್ನು ಭೇಟಿ ಮಾಡಿ ಹೇಳಿರುವುದು ನಿಜ. ಆದರೆ, ಯೋಗೇಶ್ವರ್​ಗೆ ಸಚಿವ ಸ್ಥಾನ ನೀಡುವಂತೆ ಹೋರಾಡುವುದು ನನ್ನ ಧರ್ಮ ಮತ್ತು ಕರ್ತವ್ಯ. ಇದನ್ನು ಸಿಪಿವೈ ವಿರುದ್ಧ ಹೇಳಿಕೆ ನೀಡಿದ್ದ ಶಾಸಕರಿಗೂ ತಿಳಿಸಿದ್ದೇನೆ ಎಂದರು.

ಯೋಗೇಶ್ವರ್​ಗೆ ಸಚಿವ ಸ್ಥಾನ ನೀಡುವಂತೆ ಹೋರಾಡುವುದು ನನ್ನ ಧರ್ಮ ಮತ್ತು ಕರ್ತವ್ಯ.. ರಮೇಶ್ ಜಾರಕಿಹೊಳಿ
ರಾಜಕಾರಣದಲ್ಲಿ ಆಶಾಭಾವನೆ ಇರಿಸಿಕೊಂಡಿರಬೇಕು, ಅದರಂತೆ ಸಿ.ಪಿ ಯೋಗೇಶ್ವರ್ ವಿಚಾರದಲ್ಲಿಯೂ ಇರಿಸಿಕೊಂಡಿದ್ದೇವೆ. ಅವರಿಗೆ ಸಚಿವ ಸ್ಥಾನ ಸಿಗಲಿದೆ ಎನ್ನುವ ಆಶಾಭಾವ ನಮ್ಮಲ್ಲಿದೆ ಎಂದರು.ಸಚಿವೆ ಶಶಿಕಲಾ ಜೊಲ್ಲೆ ನನ್ನ ಸಹೋದರಿ. ಅವರು ಆಗಾಗ ನಮ್ಮ ಮನೆಗೆ ಬರುತ್ತಿರುತ್ತಾರೆ ಅದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಅವರನ್ನು ಸಂಪುಟದಿಂದ ಕೈ ಬಿಡುತ್ತಾರೆ, ಅದಕ್ಕಾಗಿ ಬರುತ್ತಿದ್ದಾರೆ ಎಂದಲ್ಲ. ಯಾವುದೇ ಸಚಿವರನ್ನು ಸೇರಿಸಿಕೊಳ್ಳುವುದು. ಕೈ ಬಿಡುವುದು ಹೈಕಮಾಂಡ್ ಮತ್ತು ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ ಎಂದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಚೇರಿ ಪೂಜೆ ಇರುವುದರಿಂದ ಇಂದು ದೆಹಲಿಗೆ ತೆರಳುತ್ತಿದ್ದೇನೆ. ನಾನು ಕಾಂಗ್ರೆಸ್​​ನಲ್ಲಿದ್ದಾಗಲೂ ಸಿ.ಟಿ.ರವಿ ಅವರಿಗೆ ಆತ್ಮೀಯನಾಗಿದ್ದೆ. ಅವರು ನನ್ನ ಗೆಳೆಯನಾಗಿರುವುದರಿಂದ ಪೂಜೆಯಲ್ಲಿ ಭಾಗಿಯಾಗುತ್ತಿದ್ದೇನೆ ಎಂದರು. 105 ಶಾಸಕರು ಸರ್ಕಾರ ಬರಲು ಕಾರಣ ಎನ್ನುವ ರೇಣುಕಾಚಾರ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಚಿವರು, ಅದೂ ಕೂಡ ನಿಜವೇ ಎನ್ನುತ್ತಾ ನಿರ್ಗಮಿಸಿದರು.

ಪ್ರಭಾಕರ್ ಕೋರೆ ಚಹಾ ಕುಡಿಯಲು ನಮ್ಮ ಮನೆಗೆ ಬಂದಿದ್ದರು ಈ ಭೇಟಿ ವೇಳೆ ಬೇರೆ ಏನೂ ಮಾತನಾಡಿಲ್ಲ ಕೇವಲ ನೀರಾವರಿ ಇಲಾಖೆ ಬಗ್ಗೆ ಚರ್ಚೆ ಮಾಡಿದ್ದಾರೆ ಅಷ್ಟೇ ಎಂದರು.

Last Updated : Nov 25, 2020, 3:02 PM IST

ABOUT THE AUTHOR

...view details