ಕರ್ನಾಟಕ

karnataka

ETV Bharat / state

ಹಣ ಹಂಚಿಕೆ ಕುರಿತು ಡಿಕೆ ಶಿವಕುಮಾರ್ ಸುಳ್ಳು ಮಾಹಿತಿ: ಕ್ಷಮೆಯಾಚನೆಗೆ ರವಿಕುಮಾರ್ ಆಗ್ರಹ - ಮಸ್ಕಿ ಚುನಾವಣೆ

ಬಿಜೆಪಿ ಎರಡು ಚೀಲಗಳಲ್ಲಿ ಹಣ ಇಟ್ಟಿದ್ದರು ಎನ್ನಲಾದ ನಿಗದಿತ ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲಿಸಿದಾಗ ಅಲ್ಲಿದ್ದ ಚೀಲಗಳಲ್ಲಿ ಮಂಡಕ್ಕಿ ಸಿಕ್ಕಿದೆಯೇ ಹೊರತು ಒಂದು ನಾಣ್ಯವೂ ಸಿಕ್ಕಿಲ್ಲ. ಹೀಗಾಗಿ ಗೋಣಿಚೀಲದಲ್ಲಿ ಹಣ ಇಟ್ಟಿದ್ದಾರೆ ಎಂದು ಸುಳ್ಳು ಆರೋಪ ಮಾಡಿದ್ದ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಆಗ್ರಹಿಸಿದ್ದಾರೆ.

apologize
ಡಿಕೆ ಶಿವಕುಮಾರ್ ಕ್ಷಮೆ ಕೇಳಲಿ ಎಂದ ರವಿಕುಮಾರ್

By

Published : Apr 16, 2021, 10:48 PM IST

ಬೆಂಗಳೂರು:ಮಸ್ಕಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಬಿಜೆಪಿ ವತಿಯಿಂದ ಮತದಾರರಿಗೆ ಹಣ ಹಂಚಲಾಗುತ್ತಿದೆ, ಎರಡು ಗೋಣಿಚೀಲಗಳಲ್ಲಿ ಹಣ ಲಭಿಸಿದೆ ಎಂದು ಆರೋಪ ಮಾಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕೂಡಲೇ ಸಿಎಂ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಅವರ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಆಗ್ರಹಿಸಿದ್ದಾರೆ.

ಡಿಕೆ ಶಿವಕುಮಾರ್ ಕ್ಷಮೆ ಕೇಳಲಿ ಎಂದ ರವಿಕುಮಾರ್

ಬಿಜೆಪಿಯವರು ಎರಡು ಚೀಲಗಳಲ್ಲಿ ಹಣ ಇಟ್ಟಿದ್ದರು ಎನ್ನಲಾದ ನಿಗದಿತ ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲಿಸಿದಾಗ ಅಲ್ಲಿದ್ದ ಚೀಲಗಳಲ್ಲಿ ಮಂಡಕ್ಕಿ ಸಿಕ್ಕಿದೆಯೇ ಹೊರತು ಒಂದು ನಾಣ್ಯವೂ ಸಿಕ್ಕಿಲ್ಲ ಎಂದು ರವಿಕುಮಾರ್ ಸ್ಪಷ್ಟಪಡಿಸಿದ್ದಾರೆ. ಜೊತೆಗೆ ಈ ಕುರಿತ ವಿಡಿಯೋವನ್ನು ಅವರು ಮಾಧ್ಯಮಗಳಿಗೆ ಬಿಡುಗಡೆಗೊಳಿಸಿದ್ದಾರೆ.

ಡಿ ಕೆ ಶಿವಕುಮಾರ್ ಅವರು ಸುಳ್ಳು ಹೇಳಿರುವುದು ಇದರಿಂದ ಸಾಬೀತಾಗಿದೆ. ಈ ವಿಚಾರ ನಾಡಿನ ಜನತೆಗೂ ತಿಳಿಯಬೇಕಾಗಿದೆ. ಆದ್ದರಿಂದ ತಾವು ಈ ವಿಡಿಯೋವನ್ನು ಮಾಧ್ಯಮಗಳಿಗೆ ಬಿಡುಗಡೆಗೊಳಿಸುತ್ತಿರುವುದಾಗಿ ಅವರು ತಿಳಿಸಿದ್ದು, ಸುಳ್ಳು ಆರೋಪ ಹೊರಿಸಿದ ಡಿ ಕೆ ಶಿವಕುಮಾರ್ ಅವರ ವಿರುದ್ಧ ಚುನಾವಣಾ ಅಧಿಕಾರಿಗಳಿಗೆ ಪಕ್ಷದ ವತಿಯಿಂದ ದೂರು ನೀಡಿ ಕ್ರಮಕ್ಕೆ ಆಗ್ರಹಿಸುವುದಾಗಿ ರವಿಕುಮಾರ್ ತಿಳಿಸಿದ್ದಾರೆ.

ABOUT THE AUTHOR

...view details