ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯಣ್ಣ ಹಾಗೂ ರೆಬಲ್ ಸ್ಟಾರ್ ಅಂಬರೀಶ್ ಅಗಲಿ ಇವತ್ತಿಗೆ ಎರಡು ವರ್ಷ ತುಂಬುತ್ತಿದೆ. ಈ ಹಿನ್ನೆಲೆ ಸುಮಲತಾ ಅಂಬರೀಶ್, ಮಗ ಅಭಿಷೇಕ್, ನಟ ದರ್ಶನ್, ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ಹಿರಿಯ ನಟ ದೊಡ್ಡಣ್ಣ, ಜೈ ಜಗದೀಶ್, ವಿಜಯಲಕ್ಷ್ಮಿ ಸಿಂಗ್ ಹಾಗೂ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಗೋಪಾಲಯ್ಯ, ಅಂಬರೀಶ್ ಸಮಾಧಿಗೆ ಪೂಜೆ ಸಲ್ಲಿಸಿದರು.
ರೆಬೆಲ್ ಸ್ಟಾರ್ ಅಂಬರೀಶ್ ಇಂದು ನಮ್ಮೊಂದಿಗೆ ಇಲ್ಲದಿದ್ದರೂ ಎರಡನೇ ವರ್ಷದ ಪುಣ್ಯತಿಥಿಯನ್ನು ಅಭಿಮಾನಿಗಳು ವಿನೂತನ ರೀತಿಯಲ್ಲಿ ಆಚರಣೆ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಪುಟ್ಟಸ್ವಾಮಿ, ಅಂಬಿ ಪುಟ್ಟಣ್ಣ ಎಂಬ ಯುವಕ ಹಾಗೂ ಅವರ ತಂಡ ಅಪ್ಪಟ ಅಂಬರೀಷ್ ಅಭಿಮಾನಿಗಳಾಗಿದ್ದು, ಅವರ 50 ಕ್ಕೂ ಹೆಚ್ಚು ಚಿತ್ರಗಳ ಪೋಷಾಕುಗಳನ್ನು ಸ್ವಂತ ದುಡ್ಡಿನಲ್ಲಿ ಖರೀದಿಸಿ, ಸಂಗ್ರಹಿಸಿ, ಅಭಿನಯವನ್ನೂ ಮಾಡುತ್ತಾ ಬರುತ್ತಿದ್ದಾರೆ.