ಕರ್ನಾಟಕ

karnataka

By

Published : Aug 4, 2021, 2:43 PM IST

ETV Bharat / state

ನಾನು ಮಾಡಿರುವ ತಪ್ಪಾದರೂ ಏನು.? ಬಿಎಸ್​ವೈ ಮುಂದೆ ಕಣ್ಣೀರಿಟ್ಟ‌ ರೇಣುಕಾಚಾರ್ಯ, ರಾಜುಗೌಡ

ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ರೇಣುಕಾಚಾರ್ಯ ಮತ್ತು ರಾಜುಗೌಡಗೆ ನಿರಾಸೆಯಾಗಿದ್ದು, ಯಡಿಯೂರಪ್ಪ ಮುಂದೆ ಕಣ್ಣೀರಿಟ್ಟಿದ್ದಾರೆ ಎನ್ನಲಾಗಿದೆ. ಪಕ್ಷ ವಿರೋಧಿಗಳ ವಿರುದ್ಧ ಹೋರಾಟ ಮಾಡಿದ್ದೇ ತಪ್ಪಾ ಎಂದು ಬಿಎಸ್​ವೈ ಮುಂದೆ ಬೇಸರ ಹೊರಹಾಕಿದ್ದಾರೆ.

renukacharya-rajugowda-unhappy-towards-cm-bommai-decision
ಬಿಎಸ್​ವೈ ಮುಂದೆ ಕಣ್ಣೀರಿಟ್ಟ‌ ರೇಣುಕಾಚಾರ್ಯ, ರಾಜೂಗೌಡ

ಬೆಂಗಳೂರು: ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದ ಬಿಎಸ್​ವೈ ಆಪ್ತ ಶಾಸಕರಾದ ರೇಣುಕಾಚಾರ್ಯ ಹಾಗೂ ರಾಜುಗೌಡ ತಮ್ಮ ನಾಯಕರಾದ ಯಡಿಯೂರಪ್ಪ ಮುಂದೆ ಕಣ್ಣೀರು ಹಾಕಿದ್ದಾರೆ. ಪಕ್ಷ ವಿರೋಧಿಗಳ ವಿರುದ್ಧ ಹೋರಾಟ ಮಾಡಿದ್ದೇ ತಪ್ಪಾ ಎಂದು ಪ್ರಶ್ನಿಸಿ ಭಾವುಕರಾಗಿದ್ದಾರೆ ಎನ್ನಲಾಗಿದೆ.

ಸಿಎಂ ದೂರವಾಣಿ ನಿರೀಕ್ಷೆಯಲ್ಲಿದ್ದ ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಹಾಗೂ ಸುರಪುರ ಶಾಸಕ ರಾಜುಗೌಡ ಕರೆ ಬಾರದ ಹಿನ್ನೆಲೆ ಬಿಎಸ್​​​ವೈ ಕಾವೇರಿ ನಿವಾಸಕ್ಕೆ ಆಗಮಿಸಿದ್ದರು.

ಬಿಎಸ್‌ವೈ ಭೇಟಿ ಮಾಡಿ ಎರಡು ಗಂಟೆಗೂ ಹೆಚ್ಚು ಹೊತ್ತು ಚರ್ಚೆ ನಡೆಸಿದರು. ಈ ವೇಳೆ ರೇಣುಕಾಚಾರ್ಯ ಭಾವುಕರಾಗಿದ್ದಾರೆ. ನಾನು ಪಕ್ಷದ ನಿಷ್ಠಾವಂತನಾಗಿ ಕೆಲಸ ಮಾಡಿದ್ದೇನೆ ಆದರೂ ಸಚಿವ ಸ್ಥಾನ ಕೈತಪ್ಪಿರುವುದು ಯಾಕೆ.? ನಾನು ಮಾಡಿರುವ ತಪ್ಪಾದರೂ ಏನು.? ಪಕ್ಷ ವಿರೋಧಿಗಳ ವಿರುದ್ಧ ಹೋರಾಟ ಮಾಡಿದ್ದೇ ತಪ್ಪಾ ಎಂದು ಬೇಸರ ತೋಡಿಕೊಂಡಿದ್ದಾರೆ.

ಓದಿ:7 ಮಂದಿಗೆ ಕೊಕ್​​.. ಐವರು ಹೊಸ ಮುಖಗಳಿಗೆ ಮಣೆ: ಬಿಎಸ್​​ವೈ ಮುಂದೆ ಮಂಡಿಯೂರಿತೆ ಹೈಕಮಾಂಡ್!?

ABOUT THE AUTHOR

...view details