ದಾವಣಗೆರೆ:ಕೊರೊನಾ ವೈರಸ್ ಹರಡುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂಬ ಮಾತು ಹೇಳಿದ್ದು ಸತ್ಯ. ನಾನು ಯಾವುದೇ ಧರ್ಮದ ವಿರೋಧಿ ಅಲ್ಲ. ಈ ಮಾತಿಗೆ ಈಗಲೂ ಬದ್ಧ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಮತ್ತೊಮ್ಮೆ ಸಮರ್ಥನೆ ಮಾಡಿಕೊಂಡಿದ್ದಾರೆ.
ಈ ಸಂಬಂಧ ವಿಡಿಯೋ ಬಿಡುಗಡೆ ಮಾಡಿರುವ ಅವರು, ನವದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಗೆ ಹೋಗಿ ಬಂದ ಕೆಲ ಕೊರೊನಾ ಸೋಂಕಿತರು ಚಿಕಿತ್ಸೆ ಪಡೆದಿದ್ದಾರೆ. ಆದ್ರೆ ಮತ್ತೆ ಕೆಲವರು ಚಿಕಿತ್ಸೆ ಪಡೆದಿಲ್ಲ. ಪ್ರಧಾನಿ ಮೋದಿ ಹಾಗೂ ಸಿಎಂ ಯಡಿಯೂರಪ್ಪ ಮನವಿ ಮಾಡಿಕೊಂಡರೂ ಸೋಂಕಿತರು ಚಿಕಿತ್ಸೆ ಬಾರದೇ ತಲೆಮರೆಸಿಕೊಂಡು ಭಯೋತ್ಪಾದಕರಂತೆ ಸೋಂಕು ಹರಡುತ್ತಿದ್ದಾರೆ ಎಂದು ಆರೋಪಿಸಿದರು.