ಕರ್ನಾಟಕ

karnataka

By

Published : Jul 8, 2020, 2:43 PM IST

ETV Bharat / state

ರೇಣುಕಾಚಾರ್ಯ ಕಚೇರಿ ಸಿಬ್ಬಂದಿಗೆ ಕೊರೊನಾ.. ಆಫೀಸ್‌ಗೆ ಬದಲು ಫೋನ್‌ನಲ್ಲೇ ಸಂಪರ್ಕಿಸಲು ಮನವಿ

ವಿಕಾಸಸೌಧದಲ್ಲಿರುವ ರೇಣುಕಾಚಾರ್ಯ ಕಚೇರಿಯ ಆಪ್ತ ಶಾಖೆಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿ ಕಾಲು ನೋವಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಜುಲೈ 6ರಂದು ದಾಖಲಾಗಿದ್ದರು. ಈ ಸಂದರ್ಭದಲ್ಲಿ ಅವರಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿತ್ತು..

Renukacharya
ಶಾಸಕ ರೇಣುಕಾಚಾರ್ಯ

ಬೆಂಗಳೂರು: ನನ್ನ ಸರ್ಕಾರಿ ಅಧಿಕೃತ ಕಚೇರಿಯ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆ ಇಂದಿನಿಂದ ಶುಕ್ರವಾರ ಸಂಜೆವರೆಗೂ ಸರ್ಕಾರಿ ಗೃಹ ಕಚೇರಿಯಲ್ಲಿಯೇ ಕಾರ್ಯನಿರ್ವಹಿಸಲಿದ್ದೇನೆ ಎಂದು ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಸಾರ್ವಜನಿಕರು, ಹಿತೈಷಿಗಳು ನೇರವಾಗಿ ಬಂದು ಭೇಟಿಯಾಗದೆ, ದೂರವಾಣಿ ಮೂಲಕ ಸಂಪರ್ಕಿಸಬೇಕೆಂದು ವಿನಂತಿಸಿದ್ದಾರೆ. ವಿಕಾಸಸೌಧದಲ್ಲಿರುವ ರೇಣುಕಾಚಾರ್ಯ ಕಚೇರಿಯ ಆಪ್ತ ಶಾಖೆಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿ ಕಾಲು ನೋವಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಜುಲೈ 6ರಂದು ದಾಖಲಾಗಿದ್ದರು. ಈ ಸಂದರ್ಭದಲ್ಲಿ ಅವರಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿತ್ತು. ಇದರಿಂದ ಅವರಿಗೆ ಸೋಂಕು ಇರುವುದು ದೃಢಪಟ್ಟಿದೆ.

ABOUT THE AUTHOR

...view details