ಕರ್ನಾಟಕ

karnataka

ETV Bharat / state

ಗುತ್ತಿಗೆ ನೌಕರರನ್ನು ಖಾಯಂಗೊಳಿಸುವಂತೆ ಹೋರಾಟ.. ಅನ್ನದಾತರಿಂದಲೂ ಸಿಕ್ಕಿತು ಬಲ

ಇಂದು ನಗರದ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್‌ನವರೆಗೆ ಮೆರವಣಿಗೆ ಮಾಡಿದ ಸಾರಿಗೆ ನೌಕರರ ಪ್ರತಿಭಟನೆಗೆ ರೈತರೂ ಕೂಡ ಕೈಜೋಡಿಸಿದ್ದಾರೆ..

By

Published : Dec 10, 2020, 3:58 PM IST

requests-for-permanency-of-contract-employees-transport-workers-protest
ಗುತ್ತಿಗೆ ನೌಕರರನ್ನು ಕಾಯಂಗೊಳಿಸುವಂತೆ ಮನವಿ: ಸಾರಿಗೆ ನೌಕರರ ಪ್ರತಿಭಟನೆಗೆ ಅನ್ನದಾತರ ಸಾಥ್​

ಬೆಂಗಳೂರು :ಗುತ್ತಿಗೆ ನೌಕರರನ್ನು ಖಾಯಂಗೊಳಿಸುವಂತೆ ಮನವಿ ಮಾಡಿ ಸಾರಿಗೆ ನೌಕರರು ಇಂದು ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದರು.

ಗುತ್ತಿಗೆ ನೌಕರರನ್ನು ಖಾಯಂಗೊಳಿಸುವಂತೆ ಮನವಿ.. ಸಾರಿಗೆ ನೌಕರರ ಪ್ರತಿಭಟನೆಗೆ ಅನ್ನದಾತರ ಸಾಥ್​

ಇಂದು ನಗರದ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್‌ನವರೆಗೆ ಮೆರವಣಿಗೆ ಮಾಡಿದ ಸಾರಿಗೆ ನೌಕರರ ಪ್ರತಿಭಟನೆಗೆ ರೈತರೂ ಕೂಡ ಕೈಜೋಡಿಸಿದ್ದಾರೆ. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಪ್ರತಿಭಟನಾಕಾರರು ಫ್ರೀಡಂ ಪಾರ್ಕ್‌ನಲ್ಲಿ ಧರಣಿ ನಡೆಸಿ ಗುತ್ತಿಗೆ ನೌಕರರನ್ನು ಖಾಯಂಗೊಳಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಈ ವೇಳೆ ಮಾತನಾಡಿದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್, ನಮ್ಮ ಹೋರಾಟಕ್ಕೆ ಸರ್ಕಾರ ಸ್ಪಂದಿಸಲಿಲ್ಲವೆಂದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ. ನಮ್ಮನ್ನು ಜೈಲಿಗೆ ಕಳುಹಿಸಿದ್ರೂ ಪರವಾಗಿಲ್ಲ. ನಾವು ಪರಪ್ಪನ ಅಗ್ರಹಾರಕ್ಕೆ ಹೋಗಲೂ ಸೈ. ನಮ್ಮ ಮನವಿ ಈಡೇರುವವರೆಗೆ ನಾವು ಹಿಂದೆ ಸರಿಯುವುದಿಲ್ಲ ಎಂದು ಹೇಳಿದರು.

ABOUT THE AUTHOR

...view details