ಕರ್ನಾಟಕ

karnataka

ETV Bharat / state

ಪಿಂಚಣಿದಾರರ ವಾರ್ಷಿಕ ಭೌತಿಕ ಪರಿಶೀಲನೆ : ಈವರೆಗೆ 3.15 ಲಕ್ಷ ಅನರ್ಹ ಫಲಾನುಭವಿಗಳ ಪಿಂಚಣಿ ಸ್ಥಗಿತ! - ಪಿಂಚಣಿದಾರರ ವಾರ್ಷಿಕ ಭೌತಿಕ ಪರಿಶೀಲನೆ

ರಾಜ್ಯ ಸರ್ಕಾರದಿಂದ ನೀಡಲಾಗುವ ವಿವಿಧ ಪಿಂಚಣಿ ಯೋಜನೆಗಳಲ್ಲಿ ಅನುದಾನವು ಲಕ್ಷಾಂತರ ಅನರ್ಹ ಫಲಾನುಭವಿಗಳ ಕೈ ಸೇರುತ್ತಿದ್ದು, ಬೊಕ್ಕಸಕ್ಕೆ ಭಾರಿ ನಷ್ಟ ಆಗುತ್ತಿತ್ತು. ಇದನ್ನು ಗಂಭೀರವಾಗಿ ತೆಗೆದುಕೊಂಡಿರುವ ಕಂದಾಯ ಇಲಾಖೆ ಫಲಾನುಭವಿಗಳ ವಾರ್ಷಿಕ ಭೌತಿಕ ಪರಿಶೀಲನೆ ನಡೆಸಿ ಅನರ್ಹರನ್ನು ಪತ್ತೆ ಮಾಡಿ, ಅವರಿಗೆ ಪಾವತಿಯಾಗುತ್ತಿದ್ದ ಪಿಂಚಣಿಯನ್ನು ಸ್ಥಗಿತಗೊಳಿಸಲಾಗಿದೆ..

revenue-department-cancelled- more than 3-lakh-unqualified-beneficiaries-pension
ಪಿಂಚಣಿದಾರರ ವಾರ್ಷಿಕ ಭೌತಿಕ ಪರಿಶೀಲನೆ: ಈವರೆಗೆ 3.15 ಲಕ್ಷ ಅನರ್ಹ ಫಲಾನುಭವಿಗಳ ಪಿಂಚಣಿ ಸ್ಥಗಿತ!

By

Published : Apr 2, 2022, 3:30 PM IST

ಬೆಂಗಳೂರು :ಸಾಮಾಜಿಕ ಭದ್ರತೆ ಯೋಜನೆಯಡಿ ಲಕ್ಷಾಂತರ ಫಲಾನುಭವಿಗಳಿಗೆ ವಿವಿಧ ಪಿಂಚಣಿಗಳನ್ನು ನೀಡಲಾಗುತ್ತಿದೆ. ಆದರೆ, ಅದೆಷ್ಟೋ ಮಂದಿ ಅನರ್ಹ ಫಲಾನುಭವಿಗಳೂ ಪಿಂಚಣಿ ಪಡೆಯುವ ಮೂಲಕ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟವಾಗುತ್ತಿದೆ. ಅದಕ್ಕಾಗಿಯೇ ಕಂದಾಯ ಇಲಾಖೆ ವಾರ್ಷಿಕ ಭೌತಿಕ ಪರಿಶೀಲನೆ ನಡೆಸುತ್ತಿದೆ. ಆ‌ ಮೂಲಕ 2021-22ನೇ ಸಾಲಿನಲ್ಲಿ ಲಕ್ಷಾಂತರ ಅನರ್ಹ ಫಲಾನುಭವಿಗಳನ್ನು ಪತ್ತೆ ಮಾಡಿದೆ.

ಸಾಮಾಜಿಕ ಭದ್ರತಾ ಯೋಜನೆಯಡಿ ವಿವಿಧ ಪಿಂಚಣಿಗಳನ್ನು ನೀಡಲಾಗುತ್ತಿದೆ. ವೃದ್ಧಾಪ್ಯ‌, ವಿಧವಾ, ಅಂಗವಿಕಲ, ಸಂಧ್ಯಾ ಸುರಕ್ಷಾ, ಮನಸ್ವಿನಿ ಸೇರದಂತೆ ವಿವಿಧ ಸಾಮಾಜಿಕ ಭದ್ರತೆ ಯೋಜನೆಯಡಿ ಪಿಂಚಣಿಯನ್ನು ನೀಡಲಾಗುತ್ತಿದೆ. ರಾಜ್ಯದಲ್ಲಿ ಸುಮಾರು 70.69 ಲಕ್ಷ ಮಂದಿ ಪಿಂಚಣಿದಾರರು ಇದ್ದಾರೆ. ಪಿಂಚಣಿಗಾಗಿ ರಾಜ್ಯ ಸರ್ಕಾರ ವಾರ್ಷಿಕ 7,408.2 ಕೋಟಿ ರೂ. ಅನುದಾನ ಎತ್ತಿಡುತ್ತದೆ. ವರ್ಷಂಪ್ರತಿ ಸಾಮಾಜಿಕ ಭದ್ರತೆಗೆ ನೀಡುವ ಅನುದಾನ ಹೆಚ್ಚುತ್ತಲೇ ಇದೆ.

2022-23ರಲ್ಲಿ 9,478.35 ಕೋಟಿ ರೂ. ಅನುದಾನವನ್ನು ಪಿಂಚಣಿಗಾಗಿ ಒದಗಿಸಲಾಗಿದೆ. ಇಷ್ಟೊಂದು ಬೃಹತ್ ಪ್ರಮಾಣದ ಅನುದಾನವನ್ನು ಪಿಂಚಣಿ ನೀಡಲಾಗುತ್ತಿದೆ. ಆದರೆ, ಈ ಪಿಂಚಣಿ ಲಕ್ಷಾಂತರ ಅನರ್ಹ ಫಲಾನುಭವಿಗಳ ಕೈ ಸೇರುತ್ತಿದೆ. ಇದರಿಂದ ಬೊಕ್ಕಸಕ್ಕೆ ಭಾರಿ ನಷ್ಟ ಆಗುತ್ತಿತ್ತು. ಇದನ್ನು ಗಂಭೀರವಾಗಿ ತೆಗೆದುಕೊಂಡಿರುವ ಕಂದಾಯ ಇಲಾಖೆ ಫಲಾನುಭವಿಗಳ ವಾರ್ಷಿಕ ಭೌತಿಕ ಪರಿಶೀಲನೆ ನಡೆಸಿ ಅನರ್ಹರನ್ನು ಪತ್ತೆ ಮಾಡಿ, ಅವರಿಗೆ ಪಾವತಿಯಾಗುತ್ತಿದ್ದ ಪಿಂಚಣಿಯನ್ನು ಸ್ಥಗಿತಗೊಳಿಸಲಾಗಿದೆ.

3.15 ಲಕ್ಷ ಅನರ್ಹ ಫಲಾನುಭವಿಗಳಿಗೆ ಪಿಂಚಣಿ ಸ್ಥಗಿತ :2021-22 ಸಾಲಿನಲ್ಲಿ ಕಂದಾಯ ಇಲಾಖೆ ಭೌತಿಕ ಪರಿಶೀಲನೆ ನಡೆಸಿ ಬರೋಬ್ಬರಿ 3.15 ಲಕ್ಷ ಮಂದಿ ವಲಸೆ, ಅನರ್ಹ ಫಲಾನುಭವಿಗಳನ್ನು ಪತ್ತೆ ಹಚ್ಚಿದೆ. ಈ ಅನರ್ಹ ಫಲಾನುಭವಿಗಳ ಪಿಂಚಣಿಯನ್ನು ಸರ್ಕಾರ ಸ್ಥಗಿತಗೊಳಿಸಿದೆ.

ಆ ಮೂಲಕ ಸರ್ಕಾರದ ಬೊಕ್ಕಸದಲ್ಲಿ ಸುಮಾರು 500 ಕೋಟಿ ರೂ.ಗೂ ಅಧಿಕ ಮೊತ್ತ ಉಳಿತಾಯವಾಗಿದೆ. ನವೋದಯ ಮೊಬೈಲ್ ಆ್ಯಪ್ ಆಧರಿಸಿ ಫಲಾನುಭವಿಗಳ ಸಮಗ್ರ ವಾರ್ಷಿಕ ಪರಿಶೀಲನೆ ನಡೆಸಲಾಗಿದೆ. ವಿವಿಧ ಇಲಾಖೆಗಳ ದತ್ತಾಂಶಗಳಲ್ಲಿನ ಮಾಹಿತಿ ಆಧರಿಸಿ (ಇ–ಜನ್ಮ, ಪಡಿತರಚೀಟಿ) ಮೃತ, ವಲಸೆ, ಅನರ್ಹರನ್ನು ಗುರುತಿಸಲಾಗುತ್ತಿದೆ.

ವಿವಿಧ ಯೋಜನೆಗಳಲ್ಲಿ ನಕಲು ಪತ್ತೆ ಹಚ್ಚಲು ಎಲ್ಲ ಹಂತಗಳಲ್ಲೂ ಆಧಾರ್‌ ಹಾಗೂ ಬ್ಯಾಂಕ್‌ ಖಾತೆ ಮತ್ತು ಇತರ ಕಾರ್ಯವಿಧಾನದ ಮೂಲಕ ‘ಡಿ–ಡುಪ್ಲಿಕೇಷನ್‌’ ವ್ಯವಸ್ಥೆ ಮಾಡಲಾಗುತ್ತದೆ. ಇದರಿಂದ ಈವರೆಗೆ 3.15 ಲಕ್ಷ ಅನರ್ಹರನ್ನು ಗುರುತಿಸಲಾಗಿದೆ. ಆಧಾರ್‌ ಜೋಡಣೆ ಆಗದಿರುವುದು, ಆದಾಯ ಮಿತಿ ಹೆಚ್ಚಳ, ವಾಸಸ್ಥಳ ಬದಲು, ಮೃತರ ಹೆಸರಲ್ಲಿ ವಲಸೆ ಕಾರಣಕ್ಕೆ ಪಿಂಚಣಿ ರದ್ದು ಮಾಡಲಾಗಿದೆ.

ಸದ್ಯ ಮನೆ ಬಾಗಿಲಿಗೆ ಮಾಸಾಶನ ಅಭಿಯಾನದಡಿ ಸ್ವಯಂಪ್ರೇರಿತವಾಗಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಪಿಂಚಣಿ ಮಂಜೂರಾತಿ ಮಾಡಲಾಗುತ್ತಿದೆ. ಇತ್ತ ಫಲಾನುಭವಿಗಳನ್ನು ನಿಖರವಾಗಿ ಗುರುತಿಸುವ ನಿಟ್ಟಿನಲ್ಲಿ ಅರ್ಜಿ ಸ್ವೀಕೃತಿ ಸಮಯದಲ್ಲಿ ಆಧಾರ್ ಸಂಖ್ಯೆ ಕಡ್ಡಾಯಗೊಳಿಸಲಾಗಿದೆ. ಈಗಾಗಲೇ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳಲ್ಲಿ 69.96 ಲಕ್ಷ ಫಲಾನುಭವಿಗಳ ಆಧಾರ್ ಜೋಡಣೆ ಕಾರ್ಯ ಪೂರ್ಣಗೊಳಿಸಲಾಗಿದೆ ಎಂದು ಕಂದಾಯ ಇಲಾಖೆ ತಿಳಿಸಿದೆ.

ಡಿಬಿಟಿ ಮೂಲಕ ಪಿಂಚಣಿ ಪಾವತಿ ಎಷ್ಟು?:ಇ-ಮನಿಯಾರ್ಡರ್ ಮೂಲಕ ಪಿಂಚಣಿ ಪಡೆಯುತ್ತಿದ್ದ 36.36 ಲಕ್ಷ ಜನ ಫಲಾನುಭವಿಗಳಿಗೆ ಬ್ಯಾಂಕ್/ಅಂಚೆ ಖಾತೆಯನ್ನು ತೆರೆಯಲಾಗಿದೆ. ಅವರಿಗೆ ಡಿಬಿಟಿ (ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್‌ಫರ್) ಮೂಲಕ ನೇರವಾಗಿ ಖಾತೆಗೆ ಪಿಂಚಣಿ ಜಮೆ ಮಾಡಲಾಗುತ್ತಿದೆ ಎಂದು ಕಂದಾಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಉಳಿದ 3.64 ಲಕ್ಷ ಮಂದಿ ಫಲಾನುಭವಿಗಳಿಗೆ ಬ್ಯಾಂಕ್/ಅಂಚೆ ಕಜಾತೆ ತೆರೆಯುವ ಕಾರ್ಯ ಪ್ರಗತಿಯಲ್ಲಿದೆ. ಪ್ರಸ್ತುತ 70.69 ಲಕ್ಷ ಮಂದಿ ಫಲಾನುಭವಿಗಳಲ್ಲಿ 67.05 ಲಕ್ಷ ಮಂದಿ ಫಲಾನುಭವಿಗಳಿಗೆ ಬ್ಯಾಂಕ್/ಅಂಚೆ ಖಾತೆ ಮೂಲಕ ಪಿಂಚಣಿ ಪಾವತಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.

  • ಪಿಂಚಣಿ ಫಲಾನುಭವಿಗಳ ಅಂಕಿ-ಅಂಶ :
  • ವೃದ್ಧಾಪ್ಯ ಪಿಂಚಣಿ - 14,20,440
  • ವಿಧವಾ ಪಿಂಚಣಿ - 17,31,815
  • ಅಂಗವಿಕಲರ ಪಿಂಚಣಿ - 8,80,679
  • ಸಂಧ್ಯಾ ಸುರಕ್ಷಾ ಪಿಂಚಣಿ - 28,13,637
  • ಮನಸ್ವಿನಿ ಪಿಂಚಣಿ - 1,30,293
  • ಮೈತ್ರಿ ಯೋಜನೆ - 1,864
  • ಎಂಡೋಸಲ್ಫಾನ್ ಸಂತ್ರಸ್ಥರ ಪಿಂಚಣಿ - 6,535

ಇದನ್ನೂ ಓದಿ:ಹಿಂದೂ ಕಾರ್ಯಕರ್ತ ವಿಶ್ವನಾಥ್ ಶೆಟ್ಟಿ ಮಗನ ಓದಿನ ಜವಾಬ್ದಾರಿ ವಹಿಸಿಕೊಂಡ ಹರ್ಷ ಸಹೋದರಿ

ABOUT THE AUTHOR

...view details